Breaking News
Home / ಜಿಲ್ಲೆ / ಬೆಂಗಳೂರು / ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ನೀಡಿದ ಸವದಿ

ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ನೀಡಿದ ಸವದಿ

Spread the love

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಅನ್‍ಲಾಕ್ ನಲ್ಲಿ ಸಾರಿಗೆ ಸಂಚಾರಕ್ಕೆ ಅವಕಾಶ ಇದ್ದರೂ ಪರಿಪೂರ್ಣ ಬಸ್ ವ್ಯವಸ್ಥೆಯಿಲ್ಲದೆ ಜನ ಪರದಾಡುತ್ತಿದ್ದಾರೆ. ಆದರೆ ಇತ್ತ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸಮಸ್ಯೆ ಬಗೆಹರಿಸುವ ಬಗ್ಗೆ ಯೋಚನೆ ಮಾಡದೇ, ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ನೀಡಿದ್ದಾರೆ.

ಸಾರಿಗೆ ಸಮಸ್ಯೆಯ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಲಾಕ್‍ಡೌನ್ ಬಳಿಕ ರಾಜ್ಯದಲ್ಲಿ ಅನ್‍ಲಾಕ್ ಘೋಷಣೆಯಾಗಿದೆ. ಪ್ರಾರಂಭದಲ್ಲಿ ಈ ರೀತಿಯ ಸಮಸ್ಯೆ ಆಗೋದು ಸಹಜ. ಸಮಸ್ಯೆ ಬಗೆಹರಿಸುವ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ತಿಳಿಸದರು.

ಪ್ರಾರಂಭದ ದಿನವಾಗಿರುವುದರಿಂದ ಈ ರೀತಿಯ ವ್ಯತ್ಯಾಸ ಆಗಿದೆ. ನಾಳೆ ಯಾವುದೇ ರೀತಿಯ ತೊಂದರೆ ಇಲ್ಲದೆ ಸಮಸ್ಯೆ ಬಗೆಹರಿಯಲಿದೆ. ಈ ರೀತಿ ಸಮಸ್ಯೆಗಳಾದಾಗ ಜನ ಸ್ವಲ್ಪ ಸಹಿಸಿಕೊಳ್ಳಬೇಕು. ಉತ್ತರ ಕರ್ನಾಟಕದ ಸಿಬ್ಬಂದಿ ಇನ್ನೂ ಸಹ ಕೆಲಸಕ್ಕೆ ಹಾಜರಾಗಿಲ್ಲ. ನಾಳೆ ಬಳಿಕ ಸಾರಿಗೆ ಸಿಬ್ಬಂದಿ ಕೆಲಸಕ್ಕೆ ಬರಲಿದ್ದಾರೆ. ಸಮಸ್ಯೆ ಹಂತಹಂತವಾಗಿ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ