Breaking News
Home / Uncategorized / ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ – ಬುಧವಾರ ರಾತ್ರಿವರೆಗೂ ರೆಡ್ ಅಲರ್ಟ್

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ – ಬುಧವಾರ ರಾತ್ರಿವರೆಗೂ ರೆಡ್ ಅಲರ್ಟ್

Spread the love

ಮಂಗಳೂರು: ರಾಜ್ಯದ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.

ಇಂದು ಸಂಜೆಯಿಂದ ನಾಳೆ ರಾತ್ರಿಯವರೆಗೂ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಈ ಸಂದರ್ಭ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ನಾಳೆಯಿಂದ ಆಗಸ್ಟ್ 9ರವರೆಗೂ ಆರೆಂಜ್ ಅಲರ್ಟ್ ಘೋಷಿಸಿದ್ದು ಈ ಎಲ್ಲಾ ದಿನದಲ್ಲಿ ಕರಾವಳಿಯಾದ್ಯಂತ ಮೀನುಗಾರಿಕೆ ಸಂಪೂರ್ಣವಾಗಿ ನಿಷೇಧಿಸಲು ಸೂಚಿಸಿದೆ.

ಸಮುದ್ರ ಹಾಗೂ ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಹಾಗೂ ಮೀನುಗಾರರು ಮೀನುಗಾರಿಕೆ ನಡೆಸದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಕೊಡಗು ಜಿಲ್ಲೆಯ 15 ಪಂಚಾಯ್ತಿ ವ್ಯಾಪ್ತಿಯಲ್ಲಿ 100 ಮಿಲಿ ಮೀಟರ್ ಗೂ ಅಧಿಕ ದಾಖಲೆ ಮಳೆಯಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಸೂಚಿಸಿದೆ. ಮಡಿಕೇರಿಯ ಓಂಕಾರೇಶ್ವರ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಗುಡ್ಡ ಕುಸಿತವಾಗಿದೆ. ಚಿಕ್ಕಮಗಳೂರು- ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿಯಲ್ಲಿ ಗುಡ್ಡ ಕುಸಿತವಾಗಿದೆ.


Spread the love

About Laxminews 24x7

Check Also

ಬಯಲುಸೀಮೆಯಲ್ಲಿ ಸಾವಯವ ಸೇಬು l ಧರ್ಮಪುರದ ರೈತನ ಯಶಸ್ವಿ ಕಥೆ

Spread the love ವಿಜಯಪುರ(ದೇವನಹಳ್ಳಿ): ಸಾಮಾನ್ಯವಾಗಿ ಕಾಶ್ಮೀರದಲ್ಲಿ ಬೆಳೆಯುತ್ತಿದ್ದ ಸೇಬನ್ನು ಈಚಿನ ವರ್ಷಗಳಲ್ಲಿ ಬಯಲು ಸೀಮೆಯ ರೈತರು ಬೆಳೆದು ಯಶಸ್ವಿಯಾಗುತ್ತಿದ್ದಾರೆ. ಧರ್ಮಪುರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ