ಬೆಂಗಳೂರು: ಬೆಂಗಳೂರು ವಲಯ ಎನ್ಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ ₹15 ಕೋಟಿ ಬೆಲೆಬಾಳುವ ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ.
ಹೈದರಾಬಾದ್ನ ಪೆದ್ದ ಅಂಬರ್ಪೇಟ್ ಟೋಲ್ ಪ್ಲಾಜಾ ಬಳಿ ಟ್ರಕ್ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಲಾಗಿದ್ದು 2 ಟನ್ಗಿಂತಲೂ ಹೆಚ್ಚಿನ ಗಾಂಜಾವನ್ನ ಸೀಜ್ ಮಾಡಲಾಗಿದೆ. ಒಟ್ಟು 1,080 ಪ್ಯಾಕೆಟ್ಗಳಲ್ಲಿ ಗಾಂಜಾವನ್ನ ಸಾಗಾಟ ಮಾಡಲಾಗ್ತಿತ್ತು.. ಒಂದೊಂದು ಪ್ಯಾಕೆಟ್ನಲ್ಲಿ 2 ಕೆ.ಜಿ ಗಾಂಜಾ ಶೇಖರಿಸಲಾಗಿತ್ತು ಎನ್ನಲಾಗಿದೆ.
ಹೈದರಾಬಾದ್ನಿಂದ ಪುಣೆ, ಮುಂಬೈ ಸೇರಿದಂತೆ ಹಲವು ಕಡೆಗೆ ಈ ಗ್ಯಾಂಗ್ ಗಾಂಜಾ ಸಪ್ಲೈ ಮಾಡುತ್ತಿತ್ತಂತೆ. ಸದ್ಯ ಮಹಾರಾಷ್ಟ್ರ ಮೂಲದ ಕೆ.ಕಾಳೆ, ಡಿ. ದುರಾಲ್ಕರ್ ಎಂಬುವವರು ಸೇರಿದಂತೆ ಒಟ್ಟು ನಾಲ್ವರನ್ನ ಬಂಧಿಸಲಾಗಿದೆ. ಎನ್ಸಿಬಿ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.