Breaking News

NCB ಅಧಿಕಾರಿಗಳಿಂದ ಭರ್ಜರಿ ಬೇಟೆ: 2 ಟನ್​ಗೂ ಹೆಚ್ಚು ಗಾಂಜಾ ವಶಕ್ಕೆ

Spread the love

ಬೆಂಗಳೂರು: ಬೆಂಗಳೂರು ವಲಯ ಎನ್​ಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ ₹15 ಕೋಟಿ ಬೆಲೆಬಾಳುವ ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ.

ಹೈದರಾಬಾದ್​ನ ಪೆದ್ದ ಅಂಬರ್​ಪೇಟ್ ಟೋಲ್ ಪ್ಲಾಜಾ ಬಳಿ ಟ್ರಕ್​ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಲಾಗಿದ್ದು 2 ಟನ್​ಗಿಂತಲೂ ಹೆಚ್ಚಿನ ಗಾಂಜಾವನ್ನ ಸೀಜ್ ಮಾಡಲಾಗಿದೆ. ಒಟ್ಟು 1,080 ಪ್ಯಾಕೆಟ್​ಗಳಲ್ಲಿ ಗಾಂಜಾವನ್ನ ಸಾಗಾಟ ಮಾಡಲಾಗ್ತಿತ್ತು.. ಒಂದೊಂದು ಪ್ಯಾಕೆಟ್​ನಲ್ಲಿ 2 ಕೆ.ಜಿ ಗಾಂಜಾ ಶೇಖರಿಸಲಾಗಿತ್ತು ಎನ್ನಲಾಗಿದೆ.

ಹೈದರಾಬಾದ್​ನಿಂದ ಪುಣೆ, ಮುಂಬೈ ಸೇರಿದಂತೆ ಹಲವು ಕಡೆಗೆ ಈ ಗ್ಯಾಂಗ್ ಗಾಂಜಾ ಸಪ್ಲೈ ಮಾಡುತ್ತಿತ್ತಂತೆ. ಸದ್ಯ ಮಹಾರಾಷ್ಟ್ರ ಮೂಲದ ಕೆ.ಕಾಳೆ, ಡಿ. ದುರಾಲ್ಕರ್ ಎಂಬುವವರು ಸೇರಿದಂತೆ ಒಟ್ಟು ನಾಲ್ವರನ್ನ ಬಂಧಿಸಲಾಗಿದೆ. ಎನ್​ಸಿಬಿ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ