ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿಯಿರುವ ಸದಸ್ಯರುಗಳ ಸ್ಥಾನಕ್ಕೆ ಇಬ್ಬರನ್ನು ನೇಮಿಸಿ ರಾಜ್ಯಪಾಲ ವಜೂಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ.
ಅಧಿಕಾರಿ ಸದಸ್ಯರಾಗಿ ಡಾ. ಶಾಂತಾ ಹೊಸಮನಿ, ರಕ್ತನಿಧಿ ವೈದ್ಯಾಧಿಕಾರಿ, ಕೆ ಸಿ ಜನರಲ್ ಆಸ್ಪತ್ರೆ ಇವರನ್ನು, ಅಧಿಕಾರೇತರ ಸದಸ್ಯರಾಗಿ ಡಾ. ಹೆಚ್ ಎಸ್ ನರೇಂದ್ರ ಇವರನ್ನು ನೇಮಕಗೊಳಿಸಿ ರಾಜ್ಯಪಾಲ ವಜುಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಡಾ, ಆನಂದ್ ಕೆ ಸುತ್ತೋಲೆ ಹೊರಡಿಸಿದ್ದಾರೆ.