Breaking News

ಶೀಲ ಶಂಕಿಸಿ ಪತ್ನಿ ಹತ್ಯೆ

Spread the love

ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ನಗರದ ಹುಳಿಮಾವು ಸಮೀಪದ ಅರಕೆರೆ ಬಿಟಿಎಸ್ ಲೇಔಟ್ ನಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಆಶಾ ಎಂದು ಗುರುತಿಸಲಾಗಿದ್ದು, ಆರೋಪಿ ಮಣಿ ತನ್ನ ಪತ್ನಿಯನ್ನು ಕೊಂದ ಪತಿರಾಯ. ಆಶಾ ಹಾಗೂ ಮಣಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಅದೇ ರೀತಿ ನಿನ್ನೆ ರಾತ್ರಿಯೂ ಪತಿ, ಪತ್ನಿ ನಡುವೆ ಗಲಾಟೆಯಾಗಿದೆ. ಮಣಿ ಇತ್ತೀಚೆಗೆ ವಿಪರೀತ ಮದ್ಯ ಕುಡಿಯಲು ಆರಂಭಿಸಿದ್ದ. ಹೀಗಾಗಿ ಪತ್ನಿಯ ಶೀಲದ ಶಂಕಿಸಿ ಗಲಾಟೆ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ರಾತ್ರಿ ನಡೆದ ಜಗಳದ ಸಿಟ್ಟಿನಿಂದ ಪತ್ನಿ ಆಶಾ ಮಲಗಿದ್ದ ಸಮಯದಲ್ಲಿ ಇಂದು ಬೆಳಗಿನಜಾವ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಬೆಳಗ್ಗೆಯಾದರೂ ಆಶಾ ಮನೆಯಿಂದ ಹೊರಬಾರದ ಹಿನ್ನೆಲೆ ಪಕ್ಕದ ಮನೆಯವರು ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಕೂಡಲೇ ಹುಳಿಮಾವು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಪತಿ ಮಣಿ ಕೊಲೆ ಮಾಡಿರುವ ಬಗ್ಗೆ ಮಾಹಿತಿ ಬಂದಿದ್ದು, ಆತನ ಹುಡುಕಾಟ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ ಹೆಚ್ಚಳ: ಸಿಎಂ ಸಮರ್ಥನೆ

Spread the loveಬೆಂಗಳೂರು: “ವಸತಿ ಮೀಸಲಾತಿ ಹೆಚ್ಚಳ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ