Breaking News
Home / ರಾಜಕೀಯ / ಹೆಂಡತಿ ಮೇಲೇ ಅನುಮಾನ; ಕತ್ತು ಕೊಯ್ದು ಕೊಲೆ ಮಾಡಿದ ಪತಿರಾಯ!

ಹೆಂಡತಿ ಮೇಲೇ ಅನುಮಾನ; ಕತ್ತು ಕೊಯ್ದು ಕೊಲೆ ಮಾಡಿದ ಪತಿರಾಯ!

Spread the love

ಬೆಂಗಳೂರು: ಹೆಂಡತಿ ಅಕ್ರಮ ಸಂಬಂಧ ಹೊಂದಿರಬಹುದು ಎನ್ನುವ ಅನುಮಾನದಿಂದಾಗಿ ಗಂಡ, ಆಕೆಯ ಕತ್ತನ್ನೇ ಕೊಯ್ದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದ ಮಣಿ (36) ಬೆಂಗಳೂರಿನ ಅರಕೆರೆ ಬಳಿಯ ಬಿಟಿಎಸ್ ಲೇಔಟ್ ಮಾಸವಿದ್ದ. ಹೆಂಡತಿ ಆಶಾ (32) ಜತೆ ಸೇರಿಕೊಂಡು ಪ್ರತಿನಿತ್ಯ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ಆತನಿಗೆ ಇತ್ತೀಚೆಗೆ ಹೆಂಡತಿಯ ಮೇಲೆ ಅನುಮಾನ ಶುರುವಾಗಿದೆ. ಆಕೆ ಅಕ್ರಮ ಸಂಬಂಧ ಹೊಂದಿರುಬಹುದು ಎಂದು ಅನುಮಾನ ಬೆಳೆಸಿಕೊಂಡು ಹೋಗಿದ್ದಾನೆ. ಅದೇ ಶಂಕೆಯಿಂದಾಗಿ ಮಂಗಳವಾರ ಬೆಳಗ್ಗಿನ ಜಾವ ಆಕೆಯ ಕತ್ತನ್ನು ಕೊಯ್ದು ಕೊಲೆ ಮಾಡಿದ್ದಾನೆ.

ಮಣಿ ವಿಪರೀತವಾಗಿ ಕುಡಿತದ ವ್ಯಸನಿ ಆಗಿದ್ದಾಗಿ ಹೇಳಲಾಗಿದೆ. ಹುಳಿಮಾವು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ