Breaking News

ರಾಹುಲ್ ಗಾಂಧಿ ಭೇಟಿ ಮಾಡಿದ ಡಿ.ಕೆ.ಶಿ

Spread the love

ಹೊಸದಿಲ್ಲಿ/ ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ನಾಯಕತ್ವ ಕುರಿತಂತೆ ಚರ್ಚೆ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಪ್ರಸ್ತುತ ರಾಜಕೀಯ ವಿದ್ಯಮಾನಗಳು, ಕೆಪಿಸಿಸಿ ಪದಾಧಿಕಾರಿಗಳ ನೇಮಕ, ಜಿಲ್ಲಾಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸೋಮವಾರ ದೆಹಲಿಯಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, ಪದಾಧಿಕಾರಿಗಳ ನೇಮಕ ಹಾಗೂ ಕೆಲವು ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಲಾಗುವುದು. ನಾನು ಕಳೆದ ಒಂದು ವರ್ಷದಿಂದ ಕೆಪಿಸಿಸಿ ಅಧ್ಯಕ್ಷನಾಗಿ ಎಲ್ಲವನ್ನೂ ಗಮನಿಸಿದ್ದು ಯಾರು ಕೆಲಸ ಮಾಡಿದ್ದಾರೆ, ಯಾರು ಹೆಸರಿಗೆ ಮಾತ್ರ ಇದ್ದಾರೆ ಎಂಬುದನ್ನು ಗಮನಿಸಿದ್ದೇನೆ. ಕೆಲವೊಂದು ಬದಲಾವಣೆ ಮಾಡಬೇಕಾಗಿದೆ. ಹೀಗಾಗಿ. ಪಕ್ಷದ ನಾಯಕರ ಜತೆ ಮಾತನಾಡಲು ಬಂದಿದ್ದೇನೆ ಎಂದಿದ್ದರು.

 

ಕೆಪಿಸಿಸಿಗೆ ಕಾರ್ಯಾಧ್ಯಕ್ಷರು ಮಾತ್ರ ಇದ್ದು, ಉಳಿದಂತೆ ಅಧಿಕೃತ ಸಮಿತಿ ಇಲ್ಲ. ಕೆಲವು ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳಬದಲಾವಣೆ ಮಾಡಬೇಕಿದೆ. ಸಮಿತಿ ಗಾತ್ರ ಹೆಚ್ಚಿಸಬೇಕೇ, ಇಳಿಸಬೇಕೇ ಎಂಬ ಬಗ್ಗೆ ಎರಡು ಮೂರು ವರ್ಷಗಳಿಂದ ಚರ್ಚೆ ನಡೆದಿದೆ ಎಂದಿದ್ದರು.

ರಾಜ್ಯ ರಾಜಕೀಯದ ಸದ್ಯದ ಬೆಳವಣಿಗೆ, ಮುಂದಿನ ವಿಧಾನಸಭೆ ಚುನಾವಣೆ, ಅದಕ್ಕೂ ಮೊದಲು ಎದುರಾಗುವ ಉಪ ಚುನಾವಣೆ, ಸ್ಥಳಿಯಾಡಳಿತ ಚುನಾವಣೆಗಳ ದೃಷ್ಟಿಯಿಂದ ಈ ಭೇಟಿ ಮಹತ್ವ ಪಡೆದಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ