Breaking News

ಯಾರನ್ನು ಯಾರು ಬೆತ್ತಲೆ ಮಾಡುತ್ತಾರೋ?: ಕಾರಜೋಳ ವ್ಯಂಗ್ಯ

Spread the love

ಬೆಳಗಾವಿ: ‘ಅವ್ರು ಗೆದ್ದು ಬರಬೇಕಲ್ಲ. ಗೆದ್ದರೂ ಒಂದಾಗಬೇಕಲ್ಲ? ಎಲ್ಲರೂ ಕುಸ್ತಿ ಅಖಾಡದಲ್ಲಿದ್ದಾರೆ. ಒಬ್ಬನ ಚಡ್ಡಿ ಇನ್ನೊಬ್ಬನ ಕೈಯಲ್ಲಿದೆ. ಯಾರು ಯಾರನ್ನು ಬೆತ್ತಲೆ ಮಾಡುತ್ತಾರೋ ಗೊತ್ತಿಲ್ಲ. ಕುಸ್ತಿಯನ್ನು ನೋಡೋಣ’.

– ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ‘ಮುಂದಿನ ಮುಖ್ಯಮಂತ್ರಿ’ ಚರ್ಚೆ ಬಗ್ಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ವ್ಯಂಗ್ಯವಾಡಿದ್ದು ಹೀಗೆ.

ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ-ಡಾ.ಜಿ. ಪರಮೇಶ್ವರ ಸೇರಿ ಮೂರು ಪ್ರಬಲ ಗುಂಪುಗಳಿವೆ. ಇದರ ನಡುವೆ ಮುಖಂಡ ಶಾಮನೂರು ಶಿವಶಂಕರಪ್ಪ ಅವರು ನನಗೂ 91 ವರ್ಷವಾಗಿದ್ದು, ನಾನ್ಯಾಕೆ ಮುಖ್ಯಮಂತ್ರಿ ಆಗಬಾರದು ಎನ್ನುತ್ತಾರೆ. ಹೀಗಾಗಿ ಕಾಂಗ್ರೆಸ್‌ನವರದ್ದು ತಿರುಕನ ಕನಸಷ್ಟೆ. ಅದು ನನಸಾಗುವುದಿಲ್ಲ. ಆ ಪಕ್ಷ ಇನ್ನು ಹೀನಾಯ ಸ್ಥಿತಿಗೆ ಹೋಗಲಿದೆ’ ಎಂದರು.

ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ರಾಜೀನಾಮೆಗೆ ಮುಂದಾಗಿದ್ದಾರೆಯೇ ಎಂಬ ಪ್ರಶ್ನೆಗೆ, ‘ಆ ಬಗ್ಗೆ ನನಗೇನೂ ಗೊತ್ತಿಲ್ಲ. ಹೀಗಾಗಿ, ಏನನ್ನೂ ಹೇಳುವುದಿಲ್ಲ. ಅವರನ್ನು ಸಂಪರ್ಕಿಸಿಯೂ ಇಲ್ಲ’ ಎಂದು ಪ್ರತಿಕ್ರಿಯಿಸಿದರು.

‘ನಮ್ಮಲ್ಲಿ ಯಾವುದೇ ಗಲಾಟೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ಮುಂದೆ ಕಾರ್ಯಸೂಚಿಯೇ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರನ್ನೇ ಮುಂದುವರಿಸುತ್ತಾರೆ’ ಎಂದರು.


Spread the love

About Laxminews 24x7

Check Also

ವಿಕಲಚೇತನ ವ್ಯಕ್ತಿಗಳಿಗೆ ಕೌಶಲ್ಯ ತರಬೇತಿ: 100 ವಿಕಲಚೇತನರಿಗೆ ಪದವಿ ಪ್ರಧಾನ

Spread the loveವಿಕಲಚೇತನರನ್ನು ಆರ್ಥಿಕವಾಗಿ ಸ್ವಾಲವಂಬಿಗಳನ್ನಾಗಿ ಮಾಡಲು ಡಿಯಾಜಿಯೊ ಇಂಡಿಯಾ, ಅಂಗವಿಕಲ ವ್ಯಕ್ತಿಗಳ ಕೌಶಲ್ಯ ಮಂಡಳಿ ಸಹಭಾಗಿತ್ವದಲ್ಲಿ ಕೌಶಲ್ಯ ತರಬೇತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ