Breaking News

ಮಗನಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದ ಅಭಿಮಾನಿ

Spread the love

ಕೊಪ್ಪಳ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಭಿಮಾನಿ ಮೇಲಿನ ತಮ್ಮ ಮಗುವಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ.

ಜಿಲ್ಲೆಯ ನೂತನ ಕುಕನೂರು ತಾಲೂಕಿನ ದ್ಯಾಂಪುರದ ನಿವಾಸಿಯಾಗಿರುವ ರೈತ ಮಂಜುನಾಥ ಅವರು ತಮ್ಮ ಮಗುವಿಗೆ ಸಿದ್ದರಾಮಯ್ಯ ಎಂದು ಶಾಸ್ತ್ರೋಕ್ತವಾಗಿ ಬುಧವಾರ ಬಂಧು-ಬಾಂಧವರ ಸಮ್ಮುಖದಲ್ಲಿ ನಾಮಕರಣ ಮಾಡಿದ್ದಾರೆ. ಮಂಜುನಾಥ ಹಾಗೂ ನೇತ್ರಾವತಿ ದಂಪತಿಗೆ ಜನಿಸಿರುವ ಮೊದಲ ಗಂಡು ಮಗುವಿಗೆ ಸಿದ್ದರಾಮಯ್ಯ ಎಂದು ಹೆಸರು ಇಟ್ಟಿದ್ದಾರೆ. ಈ ಮೂಲಕ ಅವರು ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಅನ್ನಭಾಗ್ಯ ಸೇರಿದಂತೆ ಅನೇಕ ಜನೋಪಯೋಗಿ ಯೋಜನೆಗಳನ್ನು ಜಾರಿ ಮಾಡಿದ್ದರು. ಇಂತಹ ಅನೇಕ ಯೋಜನೆಗಳನ್ನು ಮೆಚ್ಚಿಕೊಂಡ ಮಂಜುನಾಥ ಅಂದಿನಿಂದ ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿಯಾಗಿದ್ದಾರೆ. ಹೀಗಾಗಿ ತಮ್ಮ ನಾಯಕನ ಬಗೆಗಿನ ಅಭಿಮಾನವನ್ನು ಯಾವ ರೀತಿ ವ್ಯಕ್ತಪಡಿಸಬೇಕು ಎಂದುಕೊಂಡಾಗ ತಮಗೆ ಜನಿಸಿದ ಮೊದಲ ಗಂಡು ಮಗುವಿಗೆ ಸಿದ್ದರಾಮಯ್ಯ ಎಂದು ಹೆಸರಿಡಲು ನಿರ್ಧರಿಸಿದ್ದಾರೆ.

ಅದರಂತೆ ಬುಧವಾರ ತಮ್ಮ ಮನೆಯಲ್ಲಿ ನಾಮಕರಣ ಕಾರ್ಯಕ್ರಮವನ್ನು ಬಂಧು-ಬಾಂಧವರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಏರ್ಪಡಿಸಿ ಮಗುವನ್ನು ತೊಟ್ಟಿಲಿಗೆ ಹಾಕಿದ್ದಾರೆ. ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಜನಪರ ಕಾಳಜಿ, ಯೋಜನೆಗಳನ್ನು ಮೆಚ್ಚಿ ಅವರ ಕಟ್ಟಾ ಅಭಿಮಾನಿಯಾಗಿರುವೆ. ಹೀಗಾಗಿ ಅವರ ಹೆಸರನ್ನು ನನ್ನ ಮಗನಿಗೆ ನಾಮಕರಣ ಮಾಡಿದ್ದೇನೆ ಎಂದು ಮಗುವಿನ ತಂದೆ ಮಂಜುನಾಥ ಅವರು ತಿಳಿಸಿದರು.


Spread the love

About Laxminews 24x7

Check Also

ಹುಕ್ಕೇರಿ : ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸಿ – ಲೋಕಾಯುಕ್ತ ವೆಂಕಟೇಶ ಯಡಹಳ್ಳಿ.

Spread the loveಹುಕ್ಕೇರಿ : ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸಿ – ಲೋಕಾಯುಕ್ತ ವೆಂಕಟೇಶ ಯಡಹಳ್ಳಿ. ಸರ್ಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ