Breaking News

ಕುಖ್ಯಾತ ರೌಡಿಗಳ ಬಂಧನ : 2.75 ಲಕ್ಷ ಮೌಲ್ಯದ ಮಾಲುಗಳ ವಶ

Spread the love

ಬೆಂಗಳೂರು, ಜೂ.25- ಆರು ಮಂದಿ ಕುಖ್ಯಾತ ದರೋಡೆಕೋರರನ್ನು ಬಂಧಿಸಿರುವ ರಾಮಮೂರ್ತಿ ನಗರ ಠಾಣೆ ಪೊಲೀಸರು 2.75 ಲಕ್ಷ ಬೆಲೆ ಬಾಳುವ 3 ದ್ವಿಚಕ್ರ ವಾಹನಗಳು, 6 ಮೊಬೈಲ್‍ಗಳು ಮತ್ತು 20 ಗ್ರಾಂ ತೂಕದ ಚಿನ್ನದ ಆಭರಣವನ್ನು ವಶಪಡಿಸಿಕೊಂಡಿದ್ದಾರೆ.

ಆರ್.ಎಸ್.ಪಾಳ್ಯದ ಜಾನಕಿ ರಾಮ್ ಲೇ ಔಟ್ ನಿವಾಸಿ ಎಚ್.ವಿಶಾಲ್ ಅಲಿಯಾಸ್ ಸೋನು (21), ಆರ್.ಎಸ್.ಪಾಳ್ಯದ ಮುನಿಯಪ್ಪ ಕ್ರಾಸ್‍ನ ನಿವಾಸಿ ಅಯ್ಯಪ್ಪ (22), ಆರ್.ಎಸ್.ಪಾಳ್ಯದ ನಿವಾಸಿ ವಿಶಾಲ್ ಅಲಿಯಾಸ್ ಮೊಟ್ಟೆ (20). ಬಾಬು ಸಾಬ್ ಪಾಳ್ಯದ ನಿವಾಸಿ ಗುರುದತ್ (29), ನಾಗಯ್ಯನ ಪಾಳ್ಯದ ನಿವಾಸಿ ಮಣಿಕಂಠನ್ (19) ಮತ್ತು ಆರ್.ಎಸ್.ಪಾಳ್ಯದ ನಿವಾಸಿ ವಿಜಯ್‍ಕುಮಾರ್ ಬಂಧಿತ ಆರೋಪಿಗಳು.

ಈ ಆರೋಪಿಗಳ ಬಂಧನ ದಿಂದ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಡಕಾಯಿತಿ , 1 ಮನೆಗಳ್ಳತನ, ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಡಕಾಯಿತಿ ಪ್ರಕರಣಗಳು ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ಶ್ರೀರಾಮುಲುಗೂ ವಿಜಯೇಂದ್ರ ಮುಂದುವರಿಯುವುದು ಬೇಕಿಲ್ಲ, ಅದನ್ನು ಚಾಣಾಕ್ಷತೆಯಿಂದ ಹೇಳುತ್ತಾರೆ!

Spread the loveಕೋಲಾರ: ಹಿರಿಯ ಬಿಜೆಪಿ ನಾಯಕ ಬಿ ಶ್ರೀರಾಮುಲು ಅವರಿಗೂ ಬಿವೈ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷನಾಗಿ ಮುಂದುವರಿಯುವುದು ಬೇಕಿಲ್ಲ, ಅದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ