Breaking News

ವ್ಯಾಕ್ಸಿನ್ ಪಡೆಯದ ಆಟೋ ಚಾಲಕರು ಆಟೋವನ್ನು ರಸ್ತೆಗಿಳಿಸುವಂತಿಲ್ಲ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ

Spread the love

ವಿಜಯಪುರ: ವ್ಯಾಕ್ಸಿನ್ ಹಾಕಿಸಿಕೊಳ್ಳದ ಆಟೋ ಚಾಲಕರು ಆಟೋಗಳನ್ನ ರಸ್ತೆಗೆ ಇಳಿಸುವ ಹಾಗಿಲ್ಲ. ಇನ್ನು ಈವರೆಗೂ ವ್ಯಾಕ್ಸಿನ್ ಪಡೆಯದ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಮಾಡುವ ಹಾಗಿಲ್ಲ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ ಸುನೀಲ್‍ಕುಮಾರ್ ಖಡಕ್ ನಿರ್ಧಾರಕ್ಕೆ ಮುಂದಾಗಿದ್ದಾರೆ.

ವ್ಯಾಕ್ಸಿನ್ ಹಾಕಿಸಿಕೊಳ್ಳಿ ಎಂದು ಎಷ್ಟೇ ಹೇಳಿದರೂ, ಆಟೋ ಚಾಲಕರು, ಬೀದಿ ಬದಿ ವ್ಯಾಪಾರಸ್ಥರು, ಕಟ್ಟಡ ಕಾರ್ಮಿಕರು ಕೇಳುತ್ತಿಲ್ಲ. ನಾವು ಆರೋಗ್ಯವಾಗಿದ್ದೀವಿ ವ್ಯಾಕ್ಸಿನ್ ಯಾಕೆ ಎಂದು ಹೇಳುತ್ತಿದ್ದಾರೆ.

ಹೀಗಾಗಿ ಗರಂ ಆಗಿರುವ ಡಿಸಿ ಸುನೀಲ್‍ಕುಮಾರ್, ವ್ಯಾಕ್ಸಿನ್ ಹಾಕಿಸಿಕೊಂಡರೇ ಮಾತ್ರ ಆಟೋ ಓಡಿಸಬೇಕು. ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡಬಹುದು. ಇಲ್ಲದಿದ್ದರೆ ಪಾಲಿಕೆ ವ್ಯಾಕ್ಸಿನ್ ಹಾಕಿಸಿಕೊಳ್ಳದವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಲೇ ಬಾರದು ಎಂದು ಆದೇಶಿಸಿದ್ದಾರೆ.

ವಿಜಯಪುರದಲ್ಲಿ 6 ಸಾವಿರದಷ್ಟು ಬೀದಿಬದಿ ವ್ಯಾಪಾರಿಗಳಿದ್ದಾರೆ, ಆದರೆ, ಅರ್ಧದಷ್ಟು ಜನರು ಕೂಡ ವ್ಯಾಕ್ಸಿನ್ ಹಾಕಿಸಿಕೊಂಡಿಲ್ಲ. 75 ಸಾವಿರ ಕಟ್ಟಡ ಕಾರ್ಮಿಕರಿದ್ದು, ಅವರು ಕೂಡ ವ್ಯಾಕ್ಸಿನ್ ಹಾಕಿಸಿಕೊಂಡಿಲ್ಲ ಎಂದು ಡಿಸಿ ಸುನೀಲ್ ಕುಮಾರ್ ಹೇಳಿದ್ದಾರೆ.


Spread the love

About Laxminews 24x7

Check Also

ವಿಲೀನ ಆದರೂ ಕೈಮಗ್ಗ ನೇಕಾರರ ಕಾರ್ಯಕ್ರಮ ಮುಂದುವರಿಕೆ

Spread the love ಬೆಳಗಾವಿ: ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮವನ್ನು ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮದೊಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ