Breaking News

ಪೊಲೀಸರೊಂದಿಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಾಗ್ವಾದ

Spread the love

ಬಾಗಲಕೋಟೆ : ಜಿಲ್ಲೆಯ ಇಳಕಲ್ಲ ನಗರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ಪೊಲೀಸರೊಂದಿಗೆ ವಾಗ್ವಾದ ನಡೆದ ಪ್ರಸಂಗ ಶನಿವಾರ ಸಂಜೆ ನಡೆದಿದೆ.

ಮಾಜಿ ಶಾಸಕ ಕಾಶಪ್ಪನವರ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯದಿಂದ ವಿಚಾರಣೆಗೆ ಹಾಜರಾಗುವ ಜಾಮೀನುಸಹಿತ ವಾರೆಂಟ್ ಜಾರಿಯಾಗಿದ್ದು, ಅದನ್ನು ತಲುಪಿಸಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಇದಕ್ಕೂ ಮುಂಚೆ ಕಾಶಪ್ಪನವರ ಮನೆಯಲ್ಲಿ ಕೌಟುಂಬಿಕ ಜಗಳ ನಡೆದಿದೆ ಎಂದು ಅಕ್ಕ-ಪಕ್ಕದ ಮನೆಯವರು ಫೋನ್ ಕಾಲ್ ಮಾಡಿ, ದೂರಿದ್ದರು. ಹೀಗಾಗಿ ನಾವು ಮನೆಗೆ ಬಂದಿದ್ದೇವೆ ಎಂದು ಪೊಲೀಸರು ಈ ವೇಳೆ ಕಾಶಪ್ಪನವರ್ ಅವರಿಗೆ ತಿಳಿಸಿದ್ದರು.

ಇದರಿಂದ ಗರಂ ಆದ ಮಾಜಿ ಶಾಸಕ ಕಾಶಪ್ಪನವರ್, ನಮ್ಮ ಮನೆಯಲ್ಲಿ ಜಗಳ ನಡೆದಿಲ್ಲ. ಅದು ಹೇಗೆ ಸರ್ಚ್ ವಾರೆಂಟ್ ಇಲ್ಲದೇ ನಮ್ಮ ಮನೆಗೆ ನುಗ್ಗಿದ್ದೀರಿ. ನಮ್ಮ ಮನೆಯಲ್ಲಿ ಯಾವಾಗ ಗಲಾಟೆ ಆಗಿದೆ ಎಂದು ಸಾಬೀತು ಮಾಡಿ. ಬಂಧಿಸುವುದಾಗಿ ಹೇಳುತ್ತೀರಿ. ನನ್ನನ್ನು ಬಂಧಿಸಿ ಎಂದು ಮನೆಯ ವರಾಂಡದಲ್ಲಿ ಕುಳಿತರು. ಈ ವೇಳೆ ಕಾಶಪ್ಪನವರ ಬೆಂಬಲಿಗರೂ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು.

 

ಹುನಗುಂದ ಸಿಪಿಐ ಹೊಸಕೇರಪ್ಪ ಕೋಳೂರ, ಇಳಕಲ್ಲ ಪಿಎಸ್‌ಐ ಎಸ್.ಬಿ. ಪಾಟೀಲ ಹಾಗೂ ಪೊಲೀಸ್ ಸಿಬ್ಬಂದಿ ಕಾಶಪ್ಪನವರ್ ಮನೆಗೆ ಭೇಟಿ ನೀಡಿ, ಬೆಂಗಳೂರಿನ ಕೋರ್ಟ್ ವಾರಂಡ್ ನೀಡಲು ಬಂದಿದ್ದೇವೆ. ನಿಮ್ಮ ಮನೆಯಲ್ಲಿ ತೀವ್ರ ಗಲಾಟೆ ನಡೆಯುತ್ತಿದೆ ಎಂದು ಫೋನ್ ಕರೆ ಬಂದಿವೆ. ಹೀಗಾಗಿ ನಾವು ಬಂದಿದ್ದೇವೆ. ನೀವು ಮಾಜಿ ಶಾಸಕರು. ಸುಮ್ಮನ್ನೆ ನ್ಯೂಸ್ ಕ್ರಿಯೆಟ್ ಮಾಡಬೇಡಿ. ನಾವು ನಿಮ್ಮ ಎದುರಾಳಿಗಲ್ಲ. ನಾವು ನಮ್ಮ ಕರ್ತವ್ಯ ನಿರ್ವಹಿಸಲು ಬಂದಿದ್ದೇವೆ. ಯಾರೇ, ಎಲ್ಲಿಂದಲೇ ಕರೆ ಮಾಡಿದರೂ ಹೋಗಿ ತಪಾಸಣೆ ಮಾಡುವುದು ನಮ್ಮ ಕರ್ತವ್ಯ ಎಂದು ವಾದಿಸಿದರು.

ಇದಕ್ಕೆ ಮತ್ತಷ್ಟು ಗರಂ ಆದ ಕಾಶಪ್ಪನವರ್, ನನ್ನ ಮೇಲೆ ಒಂದೇ ತಿಂಗಳಲ್ಲಿ ನಾಲ್ಕು ಪ್ರಕರಣ ದಾಖಲಿಸಿದ್ದೀರಿ. ನನಗೆ ಜೀವ ಬೆದರಿಕೆ ಇದೆ ಎಂದು ನಾನು ದೂರು ಕೊಟ್ಟರೂ ಈ ವರೆಗೆ ಯಾರನ್ನೂ ವಿಚಾರಣೆ ನಡೆಸಿಲ್ಲ. ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದಂತೆ ನೀವೆಲ್ಲ ಕೇಳುತ್ತಿದ್ದೀರಿ. ತಾಲೂಕಿನಲ್ಲಿ ದ್ವೇಷದ ರಾಜಕೀಯ ಮಾಡುತ್ತಿದ್ದೀರಿ. ಇದಕ್ಕೆ ನಾನು ಜಗ್ಗುವುದಿಲ್ಲ. ನನ್ನನ್ನು ಬಂಧಿಸಿ ನೋಡಿ ಎಂದರು.

ಈ ವೇಳೆ ಕಾಶಪ್ಪನವರ ಮತ್ತು ಪೊಲೀಸರ ಮಧ್ಯೆ ತೀವ್ರ ವಾಗ್ವಾದ ನಡೆಯಿತು. ಬಳಿಕ ಪೊಲೀಸರು, ಬೆಂಗಳೂರಿನಿಂದ ಬಂದಿದ್ದ ವಾರಂಟ್ ಪ್ರತಿ ನೀಡಿ, ಅಲ್ಲಿಂದ ಮರಳಿದರು.


Spread the love

About Laxminews 24x7

Check Also

RSS ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ: ಸಚಿವ ಪ್ರಿಯಾಂಕ ಖರ್ಗೆ

Spread the loveಕಲಬುರಗಿ: “ಆರ್​ಎಸ್​ಎಸ್​ನಲ್ಲಿನ ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ. ಕೊಳಕು ಮನಸ್ಸು, ಕೊಳಕು ಬುದ್ದಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ