Breaking News

ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರದಿಂದ ಆದೇಶ

Spread the love

ಬೆಂಗಳೂರು, ಜೂನ್ 26: ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸುವ ಸುಳಿವು ಸಿಕ್ಕ ಕಾರಣ, ಪ್ರತಿಭಟನೆ ತಡೆಯಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

ಈಗಾಗಲೇ ಸಾರಿಗೆ ನಿಗಮ ನಷ್ಟದಲ್ಲಿದೆ ಈ ಸಂದರ್ಭದಲ್ಲಿ ಮತ್ತೆ ಮುಷ್ಕರ ನಡೆಸದರೆ ಮತ್ತಷ್ಟು ನಷ್ಟ ಅನುಭವಿಸಬೇಕಾಗುತ್ತದೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ ಎಂಬುದು ಸರ್ಕಾರ ವಾದವಾಗಿದೆ.

 

ಜುಲೈ 1ರಿಂದ ಡಿಸೆಂಬರ್​​ 31ರವರೆಗೆ ಸಾರಿಗೆ ಸಿಬ್ಬಂದಿ ಮುಷ್ಕರವನ್ನು ನಿಷೇಧ ಮಾಡಲಾಗಿದೆ. ಆರ್ಥಿಕತೆಯ ಮೇಲೆ ಕೊವಿಡ್ ಸಾಕಷ್ಟು ಪ್ರಭಾವ ಬೀರಿದೆ. ಈ ಸಂದರ್ಭದಲ್ಲಿ ಮುಷ್ಕರ ಮಾಡುವುದು ಸೂಕ್ತವಲ್ಲ.

ಹೀಗಾಗಿ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ 3 ಅನ್ವಯ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಿದ್ದರಾಗ್ತಿದ್ದಾರೆ ಎಂಬ ಸುಳಿವು ಸಿಕ್ಕಿತ್ತು.

ಲಾಕ್​ಡೌನ್​ ಮುಗಿದ ಮೇಲೆ ಜುಲೈ 5 ರ ನಂತ್ರ ಕುಟುಂಬ ಸಮೇತ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಆದರೆ ಅದಕ್ಕೂ ಮೊದಲೇ ಅಗತ್ಯ ಸೇವೆಗಳ‌ ಮುಷ್ಕರವನ್ನ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಉಪವಿಭಾಗ 1ರ ಅನ್ವಯ ಅಗತ್ಯ ಸೇವೆಗಳ ಮುಷ್ಕರವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ