ಗೋಕಾಕ: ಸದ್ಯಕ್ಕೆ ಗೋಕಾಕ ನಗರದ ಎಲ್ಲಾ ರೀತಿಯ ಅಭಿವೃದ್ಧಿ ಹಾಗೂ, ಇನ್ನಿತರ ಕೆಲಸ ಕಾರ್ಯ ಗಳಲ್ಲಿ ರಮೇಶ್ ಜಾರಕಿಹೊಳಿ ಹೆಚ್ಚಿನ ಒತ್ತನ ಕೊಡುತ್ತಿದ್ದಾರೆ.
ಇಂದು ಗೋಕಾಕ ನಗರದ ಗ್ರಾಮೀಣ ಮಂಡಲದ ರೈತ ಮೋರ್ಚಾ ವತಿಯಿಂದ ಗೋಕಾಕ ನಗರದ ಹೊರವಲಯದ ಯೋಗಿ ಕೊಳ್ಳ ರಸ್ತೆ ಮಾರ್ಗದಲ್ಲಿ 200 ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಒಂದು ಕಾರ್ಯ ಕ್ರಮದಲ್ಲಿ ಭಾಗಿಯಾದ ಸಾಹುಕಾರ ರಮೇಶ್ ಜಾರಕಿಹೊಳಿ ಈ ಒಂದು ಕಾರ್ಯ ಕ್ರಮಕ್ಕೆ ಸಸಿ ಗಳಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು
ನಗರದಲ್ಲಿ ಸ್ಮಾರ್ಟ್ ಸಿಟಿ ಹಾಗೂ ಇನ್ನಿತರ ಕೆಲಸ ಕಾರ್ಯ ಗಳಲ್ಲಿ ಮರಗಳ ಕಡಿತ ಜಾಸ್ತಿ ಆಗಿದೆ. ಇನ್ನು 200ಸಸಿ ಗಳನ್ನ ನೆಟ್ಟು ಪರಿಸರದ ಬಗ್ಗೆ ಕಾಳಜಿ ವಹಿಸಿದ ರೈತ ಮೋರ್ಚಾ ಬಗ್ಗೆ ಸಾಹುಕಾರರು ಹೆಮ್ಮೆ ವ್ಯಕ್ತ ಪಡಿಸಿದರು..
ಇನ್ನು ಈ ಒಂದು ಸಂಧರ್ಭದಲ್ಲಿ
ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ,ಮಾಜಿ ಜಿ.ಪಂ ಸದಸ್ಯರಾದ ಟಿ.ಆರ್ ಕಾಗಲ,ಮಡ್ಡೆಪ್ಪ ತೋಳಿನವರ,ಬಿಜೆಪಿ ನಗರ ಅಧ್ಯಕ್ಷ ಭೀಮಶಿ ಭರಮನ್ನವರ,ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ,ಆನಂದ ಮೂಡಲಗಿ,ಸುರೇಶ ಸನದಿ,ರೈತ ಮೋರ್ಚಾ ನಗರ ಅಧ್ಯಕ್ಷ ಸುರೇಶ ಪತ್ತಾರ,ಲಕ್ಷ್ಮಣ ತಳ್ಳಿ,ಮಹಾಂತೇಶ ಜನ್ಮಟ್ಟಿ,ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಒಡೇಯರ, ಮಂಜು ಪ್ರಭುನಟ್ಟಿ,ಕಿರಣ ಡಮಾಮಗರ,ಶಿನು ಗೌಡ,ಸಚಿನ ಕಮಟೇಕರ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.