Breaking News

ಇಮ್ಯುನಿಟಿ ಮಾತ್ರೆ ಎಂದು ವಿಷದ ಮಾತ್ರೆ ನೀಡಿ ಮೂವರ ಹತ್ಯೆ

Spread the love

ಚೆನ್ನೈ: ಕರೊನಾ ಸೋಂಕು ಹೆಚ್ಚಾಗುತ್ತಿದೆ. ದೇಹದಲ್ಲಿ ಇಮ್ಯುನಿಟಿ ಇದ್ದರೆ ಮಾತ್ರ ನೀವು ಕರೊನಾ ಗೆಲ್ಲಬಹುದು, ಅದಕ್ಕಾಗಿ ಈ ಮಾತ್ರೆ ತಿನ್ನಿ ಎಂದು ನಕಲಿ ಆರೋಗ್ಯ ಸಿಬ್ಬಂದಿ ಕೊಟ್ಟ ಮಾತ್ರೆ ತಿಂದವರು ಇದೀಗ ಸಾವಿಗೀಡಾಗುತ್ತಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡಿನ ಈರೋಡ್​ನಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಕರುಪ್ಪಂಕೌಂಡರ್ (72 ವರ್ಷ) ಹೆಸರಿನ ವ್ಯಕ್ತಿಯ ಮನೆಗೆ ಜೂನ್ 26ರಂದು ಬಂದ ಶಬರಿ ಹೆಸರಿನ ನಕಲಿ ಆರೋಗ್ಯ ಸಿಬ್ಬಂದಿ, ಮನೆಯಲ್ಲಿ ಎಲ್ಲರೂ ಹುಷಾರಾಗಿದ್ದಾರಾ ಎಂದು ವಿಚಾರಿಸಿದ್ದಾಳೆ. ಎಲ್ಲರೂ ಹುಷಾರಾಗಿದ್ದರೂ ಕರೊನಾ ಬರೋದಿಲ್ಲವೆಂದೇನಿಲ್ಲ. ಅದಕ್ಕಾಗಿ ಈ ಮಾತ್ರೆ ತಿನ್ನಿ, ಆಗ ನಿಮಗೆ ಇಮ್ಯುನಿಟಿ ಹೆಚ್ಚಾಗುತ್ತದೆ ಎಂದು ಹೇಳಿ ಒಂದಿಷ್ಟು ಮಾತ್ರೆ ಕೊಟ್ಟು ಹೋಗಿದ್ದಾಳೆ. ಆಕೆಯ ಮಾತನ್ನು ನಂಬಿದ ಕುಟುಂಬ ಮಾತ್ರೆ ತಿಂದಿದೆ ಹಾಗೂ ಮನೆ ಕೆಲಸದ ವ್ಯಕ್ತಿಗೂ ಮಾತ್ರೆ ಕೊಟ್ಟಿದ್ದಾರೆ. ಮಾತ್ರೆ ತಿಂದ ಸ್ವಲ್ಪ ಸಮಯದಲ್ಲಿ ಎಲ್ಲರೂ ಅಸ್ವಸ್ಥರಾಗಿ ಬಿದ್ದಿದ್ದಾರೆ. ಗ್ರಾಮಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕರುಪ್ಪಂಕೌಂಡರ್ ಪತ್ನಿ ಮಲ್ಲಿಕಾ ಹಾಗೂ ಮಗಳು ದೀಪ ಮತ್ತು ಮನೆ ಕೆಲಸದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕರುಪ್ಪಂಕೌಂಡರ್ ಸ್ಥಿತಿ ಕೂಡ ಗಂಭೀರವಾಗಿದೆ.

ಕರುಪ್ಪಂಕೌಂಡರ್ ಕೆಲವು ತಿಂಗಳ ಹಿಂದೆ ಆರ್ ಕಲ್ಯಾಣಸುಂದರಂ ವ್ಯಕ್ತಿಗೆ 15 ಲಕ್ಷ ರೂಪಾಯಿ ಸಾಲ ಕೊಟ್ಟಿದ್ದನಂತೆ. ಇತ್ತೀಚೆಗೆ ಆ ಹಣವನ್ನು ವಾಪಸು ಕೊಡು ಎಂದು ಕೇಳಿದ್ದಾನೆ. ಆದರೆ ಕಲ್ಯಾಣಸುಂದರಂ ಹಣ ವಾಪಸು ಮಾಡಲು ವಿಫಲವಾಗಿದ್ದಾನೆ. ಹಾಗಾಗಿ ಹೇಗಾದರೂ ಮಾಡಿ ಕರುಪ್ಪಂಕೌಂಡರ್ ಕುಟುಂಬವನ್ನೇ ನಾಶ ಮಾಡಬೇಕೆಂದು ಪ್ಲಾನ್ ಮಾಡಿದ್ದಾನೆ. ಶಬರಿಯನ್ನು ಬಳಸಿಕೊಂಡು ಆಕೆಯನ್ನು ಕರುಪ್ಪಂಕೌಂಡರ್ ಮನೆಗೆ ಕಳುಹಿಸಿ ವಿಷವನ್ನೇ ಇಮ್ಯುನಿಟಿ ಮಾತ್ರೆಗಳೆಂದು ಕೊಟ್ಟು ಅವಾಂತರ ಸೃಷ್ಟಿಸಿದ್ದಾನೆ. ಈ ವಿಚಾರ ತನಿಖೆಯಲ್ಲಿ ಬಯಲಾಗಿದ್ದು, ಶಬರಿ ಹಾಗೂ ಕಲ್ಯಾಣಸುಂದರಂ ಅನ್ನು ಬಂಧಿಸಲಾಗಿದೆ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ