Breaking News
Home / ಜಿಲ್ಲೆ / ಬೆಂಗಳೂರು / ಪಡಿತರ ಚೀಟಿದಾರರೇ ಗಮನಿಸಿ : ಜುಲೈ 1 ರಿಂದ `ಇಕೆವೈಸಿ’ ಪ್ರಕ್ರಿಯೆ ಆರಂಭ

ಪಡಿತರ ಚೀಟಿದಾರರೇ ಗಮನಿಸಿ : ಜುಲೈ 1 ರಿಂದ `ಇಕೆವೈಸಿ’ ಪ್ರಕ್ರಿಯೆ ಆರಂಭ

Spread the love

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಜುಲೈ 1 ರಿಂದ ರೇಷನ್ ಕಾರ್ಡ್ ಗೆ ಆಧಾರ್ ದೃಢೀಕರಣ (ಇಕೆವೈಸಿ) ಪ್ರಕ್ರಿಯೆ ಮತ್ತೆ ಶುರುವಾಗಲಿದೆ ಎಂದು ಹೇಳಿದೆ.

 

ನ್ಯಾಯಬೆಲೆ ಅಂಗಡಿ ವರ್ತಕರು ಕಡ್ಡಾಯವಾಗಿ ರೇಷನ್ ಕಾರ್ಡ್ ಗೆ ಆಧಾರ್ ಜೋಡಣೆ ಮಾಡಬೇಕು ಎಂದು ಆಹಾರ ಇಲಾಖೆ ಆದೇಶ ನೀಡಿದೆ. 5 ವರ್ಷಗಳ ಹಿಂದೆ ಆಹಾರ ಇಲಾಖೆ ವತಿಯಿಂದ ಬೋಗಸ್ ಕಾರ್ಡ್ ತಡೆಯುವ ಸಲುವಾಗಿ ರಾಜ್ಯಾದ್ಯಂತ ರೇಷನ್ ಕಾರ್ಡ್ ಗಳ ಪರಿಶೀಲನ ಕಾರ್ಯ ನಡೆದಿತ್ತು. ನಂತರ ಆಧಾರ್ ಜೋಡಣೆ ನಿಯಮ ತರಲಾಗಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಇಕೆವೈಸಿ ಪ್ರಕ್ರಿಯೆ ಜುಲೈ 1 ರಿಂದ ಮತ್ತೆ ಶುರುವಾಗಲಿದೆ.

 

ಪ್ರಸ್ತುತ ರಾಜ್ಯದಲ್ಲಿ 7,69,585 ಅಂತ್ಯೋದಯ, 1,16,84,911 ಬಿಪಿಎಲ್ ಮತ್ತು 19,41,962 ಎಪಿಎಲ್ ಸೇರಿ ಒಟ್ಟು 1,43,96,188 ಕಾರ್ಡ್ ಗಳಿದ್ದು, 4,87,33,221 ಸದಸ್ಯರಿದ್ದಾರೆ. ಕಳೆದ 5 ವರ್ಷಗಳಲ್ಲಿ ಅಂದಾಜು 10 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದಾರೆ. ಹೀಗಾಗಿ ರಾಷ್ಟ್ರೀಯ ಆಹಾರ ಸುರಕ್ಷತೆ ಕಾಯ್ದೆ -2013 ಪ್ರಕಾರ ಹಾಗೂ ಸುಪ್ರೀಂಕೋರ್ಟ್ ಆದೇಶದನ್ವಯ ಪಡಿತರ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ