ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ರಾಜ್ಯ ಸರ್ಕಾರದಿಂದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಬಹುಆಯ್ಕೆ ಉತ್ತರದ ಮಾದರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಇಂತಹ ಪರೀಕ್ಷೆಯನ್ನು ಜುಲೈ.19 ಹಾಗೂ ಜುಲೈ.22ರಂದು ನಡೆಸಲಾಗುತ್ತದೆ ಎಂಬುದಾಗಿ ಘೋಷಣೆ ಮಾಡಲಾಗಿದೆ. ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಇದೀಗ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.
ಈ ಕುರಿತಂತೆ ಪ್ರಕಟಣೆಯನ್ನು ಕರ್ನಾಟ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಜುಲೈ.2021ರ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಈ ಕೆಳಗಿನಂತೆ ವಿಷಯವಾರು ಪರೀಕ್ಷೆ ನಿಗದಿ ಪಡಿಸಲಾಗಿದೆ.
ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ