Breaking News

ಕಾನ್‍ಸ್ಟೇಬಲ್ ಹುದ್ದೆಗೆ ಅರ್ಜಿ- ವಯೋಮಿತಿ ಹೆಚ್ಚಿಸಲು ಆಗ್ರಹ

Spread the love

ಧಾರವಾಡ: ಸರ್ಕಾರ ಕೊವಿಡ್ ನಿಯಂತ್ರಣಕ್ಕೆ ನಿರಂತರ ಲಾಕ್‍ಡೌನ್ ಜಾರಿಗೊಳಿಸಿ, ಪೊಲೀಸ್ ನೇಮಕಾತಿಗಳನ್ನು ವಿಳಂಬ ಮಾಡಿದ್ದರಿಂದ ಕೆಲವು ವಿದ್ಯಾರ್ಥಿಗಳಿಗೆ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಅರ್ಜಿ ಹಾಕುವ ವಯೋಮಿತಿ ಮೀರಿ ಹೋಗಿದೆ. ಹೀಗಾಗಿ ಸರ್ಕಾರ ವಯೋಮಿತಿಯನ್ನು ಹೆಚ್ಚಿಸಬೇಕು ಎಂದು ವಿದ್ಯಾಕಾಶಿ ಕರಿಯರ್ ಅಕಾಡೆಮಿ ಸಿಬ್ಬಂದಿ ಆಗ್ರಹಿಸಿದ್ದಾರೆ.

ವಯೋಮಿತಿ ಹೆಚ್ಚಿಸುವಂತೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು. ವಯೋಮಿತಿ ಹೆಚ್ಚಿಸದಿದ್ದರೆ, ಪೊಲೀಸ್ ಹುದ್ದೆಯನ್ನು ನೆಚ್ಚಿಕೊಂಡು ಕುಳಿತ ಸಾವಿರಾರು ವಿದ್ಯಾರ್ಥಿಗಳ ಕನಸಿಗೆ ಅಡ್ಡಿಯಾಗಲಿದೆ. ಕೆಲವು ರಾಜ್ಯಗಳಲ್ಲಿ ಪೊಲೀಸ್ ಕಾನ್‍ಸ್ಟೆಬಲ್ ಹುದ್ದೆಯ ವಯೋಮಿತಿ ಹೆಚ್ಚಾಗಿದೆ. ಅದೇ ರೀತಿ ರಾಜ್ಯದಲ್ಲೂ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳಿಗೆ 27, ಸಾಮಾನ್ಯ ವರ್ಗದವರಿಗೆ 25 ವಯಸ್ಸಿನ ಮಿತಿ ಇದೆ. ಇದರಿಂದ ಸಾವಿರಾರು ಬಡ ವಿದ್ಯಾರ್ಥಿಗಳ ಸರ್ಕಾರಿ ಕೆಲಸದ ಕನಸಿಗೆ ಅಡ್ಡಿಯಾಗಿದೆ. ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ವಯೋಮಿತಿ ಸಡಿಲಿಕೆಗೆ ಅವಕಾಶ ಕಲ್ಪಿಸಬೇಕು ಆಗ್ರಹಿಸಿದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ