Breaking News

ರಮೇಶ ಜಾರಕಿಹೊಳಿ ಸರಕಾರಕ್ಕೆ ಮುಜುಗರ ತರುವ ಕೆಲಸ ಮಾಡುತ್ತಿಲ್ಲ : ಭೈರತಿ ಬಸವರಾಜ್

Spread the love

ಹುಬ್ಬಳ್ಳಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಸರಕಾರಕ್ಕೆ ಮುಜುಗರ ತರುವ ಕೆಲಸ ಮಾಡುತ್ತಿಲ್ಲ. ಬೇಸರ ಹಾಗೂ ಉದ್ವೇಗದಿಂದ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದರು. ಅವರ ಸಹೋದರರೆಲ್ಲಾ ಸಮಾಧಾನ ಮಾಡಿದ್ದಾರೆ. ಯಾವುದೋ ಒಂದು ಪ್ರಕರಣವಿದೆ. ಅದು ಇತ್ಯರ್ಥವಾದ ನಂತರ ಸಚಿವರಾಗುತ್ತಾರೆ. ನಾವೆಲ್ಲರೂ ಅವರೊಂದಿಗೆ ಇದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಅವರ ಜೊತೆಗೆ ಇದ್ದೇವೆ. ಇಂದು ನಿನ್ನೆಯ ಸ್ನೇಹವಲ್ಲ. ಯುವ ಕಾಂಗ್ರೆಸ್ ಹಂತದಿಂದಲೇ ಸ್ನೇಹಿತರಾಗಿದ್ದೇವೆ. ಸಣ್ಣಪುಟ್ಟ ಅಹಿತರಕ ಘಟನೆಗಳು ನಡೆದಿವೆ ಎಂದರು.

 

ಹೀಗಾಗಿ ಸ್ವಲ್ಪ ಸಮಸ್ಯೆಯಾಗಿದೆ. ಪ್ರಕರಣ ಎಸ್‌ಐಟಿ ಮುಂದೆ ಇದೆ. ಎಸ್‌ಐಟಿ ಏನು ತೀರ್ಮಾನ ಮಾಡುತ್ತಿದ್ದೆ ನೋಡಬೇಕು. ಆದರೆ ಶೀಘ್ರದಲ್ಲಿ ಪ್ರಕರಣ ಮುಗಿಯಲಿದೆ ಎನ್ನುವ ಭರವಸೆಯಿದೆ. ನಂತರ ಸಚಿವ ಸಂಪುಟ ಸೇರ್ಪಡೆಗೊಳ್ಳಲಿದ್ದಾರೆ ಎಂದ ಅವರು, ಮೂವರು ಬಿಜೆಪಿ ನಾಯಕರು ಬೆನ್ನಿಗೆ ಚೂರಿ ಹಾಕಿದ್ದಾರೆ ಎನ್ನುವ ರಮೇಶ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವ ಬಸವರಾಜ, ಈ ಕುರಿತು ಅವರನ್ನೇ ಕೇಳಿ ಎಂದರು.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ