Breaking News
Home / ರಾಜಕೀಯ / ಇಂದು ಬೆಳಗಾವಿಯಲ್ಲಿ ಪುಲ್ವಾಮ ಹುತಾತ್ಮ ಯೋಧನ ಅಂತ್ಯಕ್ರಿಯೆ

ಇಂದು ಬೆಳಗಾವಿಯಲ್ಲಿ ಪುಲ್ವಾಮ ಹುತಾತ್ಮ ಯೋಧನ ಅಂತ್ಯಕ್ರಿಯೆ

Spread the love

ಬೆಳಗಾವಿ: ಪುಲ್ವಾಮಾದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ವೀರಯೋಧ ಕಾಶಿರಾಮ ಬೋಮನಹಳ್ಳಿ ಅವರ ಪಾರ್ಥಿವ ಶರೀರವನ್ನ ಬೆಳಗಾವಿಗೆ ತರಲಾಗಿದೆ.

 

 

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಯೋಧ ಕಾಶಿರಾಮ್, ಉಗ್ರರ ದಾಳಿಯಿಂದ ಹುತಾತ್ಮರಾಗಿದ್ರು. ನಿನ್ನೆ ರಾತ್ರಿ ಯೋಧನ ಪಾರ್ಥಿವ ಶರೀರವನ್ನ ವಿಶೇಷ‌ ವಾಹನದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತರಲಾಗಿತ್ತು. ಇಂದು ಯೋಧನ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

 

ವಿಜಯಪುರ ಮೂಲದ ಯೋಧ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಹುತಾತ್ಮರಾಗಿದ್ದು, ಯೋಧನ ಪಾರ್ಥಿವ ಶರೀರ ಇಂದು ಹುಟ್ಟೂರು ತಲುಪಲಿದೆ.

ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಯೋಧ ಕಾಶೀರಾಯ ಬೊಮ್ಮನಹಳ್ಳಿ, ಕಳೆದ ಜುಲೈ 2 ರಂದು ಪುಲ್ವಾಮಾದಲ್ಲಿ ನಡೆದ ರಕ್ಷಕ್ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದಾರೆ.

ನಿನ್ನೆ ರಾತ್ರಿ ವಿಶೇಷ ವಿಮಾನದಲ್ಲಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಯೋಧನ ಪಾರ್ಥಿವ ಶರೀರ ತಲುಪಿದ್ದು, ಹುತಾತ್ಮ ಯೋಧನಿಗೆ ಬೆಳಗಾವಿಯಲ್ಲಿ ಗೌರವ ಸಲ್ಲಿಸಲಾಯಿತು.

ಇನ್ನು ಇಂದು ವಿಜಯಪುರದಿಂದ ಯೋಧನ ಸ್ವಗ್ರಾಮದವರೆಗೆ ಱಲಿ ನಡೆಸಿ, ನಂತರ ಉಕ್ಕಲಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ ನಡೆಯಲಿದೆ.

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ