Breaking News

ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧವಲ್ಲ:ಮಾಧುಸ್ವಾಮಿ

Spread the love

ಉಡುಪಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಕಸ್ಮಿಕ ಘಟನೆಗೆ ಬಲಿಯಾಗಿದ್ದಾರೆ. ನಾವೆಲ್ಲ ಶಾಸಕರು ಜಾರಕಿಹೊಳಿ ಬಗ್ಗೆ ಅನುಕಂಪವಿಟ್ಟುಕೊಂಡಿದ್ದೇವೆ ಎಂದು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಸಚಿವರು, ಸಿಡಿ ಬಹಿರಂಗ ಪ್ರಕರಣ ಇದೊಂದು ಕಾನೂನಾತ್ಮಕ ಹಾಗೂ ನೈತಿಕ ವಿಚಾರ. ನೈತಿಕವಾಗಿ ಹೊಣೆಹೊತ್ತು ಅವರು ರಾಜೀನಾಮೆ ನೀಡಿದ್ದಾರೆ. ಕಾನೂನಾತ್ಮಕವಾಗಿಯೂ ಸಮಸ್ಯೆ ಇದೆ ಎನಿಸಲ್ಲ ಎಂದರು.

ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಯುವತಿ ವರ್ತನೆ ನೋಡಿದರೆ ಇಚ್ಛಿಸಿ ಹೋದಂತೆ ಅನಿಸುತ್ತೆ. ಹೀಗಾಗಿ ರಮೇಶ್ ಜಾರಕಿಹೊಳಿಗೆ ಶಿಕ್ಷೆಯಾಗದಿರಬಹುದು. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಅಗತ್ಯವಿಲ್ಲ. ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ಯಾರನ್ನೂ ದೂರಲು ಸಾಧ್ಯವಿಲ್ಲ ಎಂದು ತಿಳಿಸಿದರು.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ