ಬಾಯಿ ಮುಚ್ಚಿದರೆ ಸರಿ- ಚಕ್ರವರ್ತಿಗೆ ಪ್ರಿಯಾಂಕಾ ಅವಾಜ್

Spread the love

ಬಿಗ್‍ಬಾಸ್ ಮನೆಲಿ ಸೈಲೆಂಟ್ ಆಗಿದ್ದ ಪ್ರಿಯಾಂಕ ತಿಮ್ಮೇಶ್ ಇದೀಗ ಜೋರು ಧ್ವನಿಯಲ್ಲಿ ಚಕ್ರವರ್ತಿ ಅವರಿಗೆ ಅವಾಜ್ ಹಾಕಿದ್ದಾರೆ. ಬಿಗ್‍ಬಾಸ್ ಮನೆಯಲ್ಲಿ ಜಗಳದ ಬೆಂಕಿ ಹೊತ್ತಿ ಉರಿಯುತ್ತಿದೆ.

ಅವರು ನೇರವಾಗಿಲ್ಲ. ನಾಟಕೀಯ, ಸ್ಕೋಪ್ ತಗೆದುಕೂಳ್ಳುತ್ತಿದ್ದೀಯಾ? ಎಂದು ನನಗೆ ಹೇಗೆ ಹೇಳುತ್ತಿರುತ್ತಿರಾ ಎಂದು ಪ್ರಿಯಾಂಕಾ ಸುದೀಪ್ ಮುಂದೆ ಹೇಳಿಕೊಂಡಿದ್ದರು. ಕಟ್ಟೆಪಂಚಾಯ್ತಿಯಲ್ಲಿ ಈ ವಿಷಯನ್ನು ಇತ್ಯರ್ಥಮಾಡಿ ಸುದೀಪ್ ರಾಜಿ ಮಾಡಿದ್ದರು. ಈ ಹಿಂದೆ ಚಕ್ರವರ್ತಿ ಮತ್ತು, ಪ್ರಿಯಾಂಕಾ ನಡುವೆ ಹಲವು ಸಣ್ಣ ಸಣ್ಣ ವಿಚಾರಗಳಿಗೆ ಜಗಳವಾಗಿತ್ತು. ಆದರೆ ಇದೇ ವಿಷಯಗಳನ್ನು ಮತ್ತೇ ಕೆದಕಿಕೊಂಡು ಇಬ್ಬರು ಕಿತ್ತಾಟ ನಡೆಸಿದ್ದಾರೆ. ಕಾಲು ಕೆದರಿಕೊಂಡು ಜಗಳ ಮಾಡುವ ಚಕ್ರವರ್ತಿ ವಿರುದ್ಧವಾಗಿ ಪ್ರಿಯಾಂಕ ತಿರುಗಿ ಬಿದ್ದಿದ್ದಾರೆ.

ಸಾಧ್ಯವಾದಷ್ಟು ಸೈಲೆಂಟ್ ಆಗಿಯೇ ಇದ್ದ ಪ್ರಿಯಾಂಕಾ ಯಾರು ಏನೇ ಹೇಳಿದರೂ ಅದನ್ನು ತಾಳ್ಮೆಯಿಂದ ನಿಭಾಯಿಸಿಕೊಂಡು ಸಾಗುತ್ತಿದ್ದರು. ಚಕ್ರವರ್ತಿ ಅವರ ಮಾತಿನಿಂದ ಆಗಾಗ ಪ್ರಿಯಾಂಕಾ ಅವರನ್ನು ಕೆಣಕುತ್ತಿದ್ದರು. ಇದೇ ಮೊದಲ ಬಾರಿಗೆ ಪ್ರಿಯಾಂಕಾ ತಿಮ್ಮೇಶ್ ಅವರು ದೊಡ್ಮನೆಯೊಳಗೆ ಉಗ್ರಾವತಾರ ತೋರಿದ್ದಾರೆ. ತಮ್ಮ ಬಗ್ಗೆ ಇಲ್ಲಸಲ್ಲದ ಮಾತನಾಡಿದ ಚಕ್ರವರ್ತಿ ಚಂದ್ರಚೂಡ್‍ಗೆ ಖಡಕ್ ಆಗಿ ವಾನಿರ್ಂಗ್ ನೀಡಿದ್ದಾರೆ.

 


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ