Breaking News

ರಾಜ್ಯದಲ್ಲಿ ಎರಡು ವರ್ಷ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ : ಗೋವಿಂದ ಕಾರಜೋಳ

Spread the love

ಕುಷ್ಟಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೇಯೇ ಇಲ್ಲ. ಮುಂದಿನ ಎರಡು ವರ್ಷಗಳವರೆಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿಗಳು ಆಗಿರುತ್ತಾರೆ. ಯಡಿಯೂರಪ್ಪ ನಾಯಕತ್ವದಲ್ಲಿ ಸರ್ಕಾರವು ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಕುಷ್ಟಗಿಯ ಶ್ರೀ ಬುತ್ತಿ ಬಸವೇಶ್ವರ ದೇವಸ್ಥಾನದ ಸಭಾ ಮಂಟಪದಲ್ಲಿ ಕುಷ್ಟಗಿ ತಾಲೂಕಿನ ಮಾಜಿ ದೇವದಾಸಿಯರಿಗೆ ಜಮೀನಿನ ಖರೀದಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸದ್ಯಕ್ಕೆ ಇಲ್ಲ. ಬದಲಾವಣೆಯ ನಂತರ ಬಂದು ಕೇಳಿದರೆ ಹೇಳುವೆ. ಬಿಜೆಪಿಯಲ್ಲಿ ದಲಿತ ಸಿಎಂ ಬಗ್ಗೆ ಸುದ್ದಿಗಾರರ ಪ್ರಶ್ನೆ ಇಂತಹ ಪ್ರಶ್ನೆ ಬೇಡ ಎಂದರು.

ರಾಜ್ಯ ಕಾಂಗ್ರೆಸ್ನಲ್ಲಿ ಈಗಲೇ ಮುಂದಿನ ಸಿಎಂ ವಿಚಾರ ಹಾಗೂ ದಲಿತ ಸಿಎಂ ಪ್ರಸ್ತಾಪ ಕುರಿತು ಕಾಂಗ್ರೆಸ್ ದಲಿತರನ್ನು, ಅಲ್ಪ ಸಂಖ್ಯಾತರನ್ನು, ಹಿಂದುಳಿದವರನ್ನು ಓಟ್ ಬ್ಯಾಂಕ್ ರಾಜಕಾರ ಮಾಡಿಕೊಂಡು 60 ವರ್ಷ ಆಡಳಿತ ಮಾಡಿದೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ವಿದ್ಯಾವಂತರಾಗಿ ತಿಳುವಳಿಕೆ ಬಂದಾಗ ಕಾಂಗ್ರೆಸ್ನಿಂದ ದೂರ ಸರಿದಿದ್ದು ಇದೀಗ ಕಾಂಗ್ರೆಸ್ ಅನಾಥವಾಗಿದೆ. ಯಾವ ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರ ತರುವ ಪ್ರಯತ್ನ ಆಗಲಿಲ್ಲ. ಕಳೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ, ಮಹಾತ್ಮ ಗಾಂಧೀಜೀಯವರು ಹೇಳಿದಂತೆ ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಲ್ಲ ಸ್ವಾತಂತ್ರ್ಯ ಹೋರಾಟಕ್ಕಾಗಿ ಕಟ್ಟಿಕೊಂಡ ಸಂಘಟನೆಯಾಗಿದ್ದು ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ನ್ನು ವಿಸರ್ಜನೆ ಮಾಡಲು ಹೇಳಿದ್ದರು. ಮಹಾತ್ಮ ಗಾಂಧೀಜಿಯವರು ಹೇಳಿದ ಮಾತು ಆಗ ಆಗಲಿಲ್ಲ ಈಗ ಆಗುತ್ತಿದೆ.


Spread the love

About Laxminews 24x7

Check Also

ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ.

Spread the loveದಾವಣಗೆರೆ : ಲೋಕಸಭೆ ಚುನಾವಣೆಯಲ್ಲಿ ಯಾರ ಬಳಿ ಎಷ್ಟು ಕೋಟಿ ರೂಪಾಯಿ ಹಣ ಪಡೆದಿದ್ದೀಯಾ ಎಂಬುದು ಗೊತ್ತಿದೆ. ಭದ್ರಾವತಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ