Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ: ಮಾಸಿ, ಹರಿದು ಹೋದ ಕನ್ನಡ ಧ್ವಜ ಬದಲಿಸಿ ಎಂದು ಕರ್ನಾಟಕದಲ್ಲೇ ಪ್ರತಿಭಟನೆ ಮಾಡುವ ಸ್ಥಿತಿ!

ಬೆಳಗಾವಿ: ಮಾಸಿ, ಹರಿದು ಹೋದ ಕನ್ನಡ ಧ್ವಜ ಬದಲಿಸಿ ಎಂದು ಕರ್ನಾಟಕದಲ್ಲೇ ಪ್ರತಿಭಟನೆ ಮಾಡುವ ಸ್ಥಿತಿ!

Spread the love

ಬೆಳಗಾವಿ: ಬಣ್ಣ ಮಾಸಿ, ಹರಿದು ಹೋಗಿರುವ ಕನ್ನಡ ಧ್ವಜವನ್ನು ಬದಲಿಸಬೇಕೆಂದು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡಪರ ಸಂಘಟನೆಗಳು ಧರಣಿ ಕೈಗೊಂಡಿವೆ. ಮೂರು ತಿಂಗಳಿಂದ ಮನವಿ ಮಾಡುತ್ತಿದ್ದರೂ ಧ್ಚಜ ಬದಲಾವಣೆ ಮಾಡಿಲ್ಲ. ಉದ್ದೇಶಪೂರ್ವಕವಾಗಿ ಪಾಲಿಕೆ ಹೀಗೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಕನ್ನಡ ಧ್ವಜ ಹಾಗೂ ಹಗ್ಗ ತೆಗೆದುಕೊಂಡು ಬಂದಿರುವ ಕನ್ನಡಪರ ಹೋರಾಟಗಾರರು ಕೊರಳಿಗೆ ಹಗ್ಗ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಧ್ವಜಸ್ತಂಭದ ಸುತ್ತ ಬ್ಯಾರಿಕೇಡ್ ಅಳವಡಿಸಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಧ್ವಜಸ್ತಂಭದ ಬಳಿ ಹೋರಾಟಗಾರರು ಹೋಗದಂತೆ ಪೊಲೀಸರು ಭದ್ರತೆ ಒದಗಿಸಿದ್ದಾರೆ. ವಿರೋಧದ ನಡುವೆಯೂ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭ ಸ್ಥಾಪನೆ ಮಾಡಲಾಗಿದೆ.

ಧ್ವಜ ಬದಲಿಸಲು ಕನ್ನಡಪರ ಹೋರಾಟಗಾರ ಶ್ರೀನಿವಾಸ್ ತಾಳೂಕರ್, ವಾಜೀದ್ ಹಿರೇಕೂಡಿ ಆಗ್ರಹಪಡಿಸಿದ್ದಾರೆ. ಪಾಲಿಕೆ ಉದ್ದೇಶಪೂರ್ವಕವಾಗಿ ಕನ್ನಡ ಧ್ವಜವನ್ನು ಬದಲಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಇದೇ ಮಾದರಿಯಲ್ಲಿ ಡಿಸೆಂಬರ್ 28ರಂದು ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ಹಾರಾಡಿಸಲಾಗಿತ್ತು. ಈ ವೇಳೆ ಬೆಳಗಾವಿಯಲ್ಲಿ ಪರ ವಿರೋಧ ಪ್ರತಿಭಟನೆಯೂ ನಡೆದಿತ್ತು ಎಂಬುವುದನ್ನು ಇಲ್ಲಿ ಸ್ಮರಿಸಬಹುದು.

 


Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ