Breaking News

ವಕೀಲರ ವೇಷದಲ್ಲಿ ಕೋರ್ಟಿಗೆ ಬಂದು ಶರಣಾದ ಕೊಲೆ ಆರೋಪಿಗಳು

Spread the love

ಬೆಂಗಳೂರು: ಹಾಡುಹಗಲೇ ಬನಶಂಕರಿ‌ ದೇವಾಲಯ‌ದ ಮುಂದೆ ಫೈನಾನ್ಸಿಯರ್ ಮದನ್​ ಎಂಬುವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ 7 ಮಂದಿ ಆರೋಪಿಗಳು ವಕೀಲರ ವೇಷದಲ್ಲಿ ನ್ಯಾಯಾಲಯದ‌ ಮುಂದೆ ಶರಣಾದರು.ವಕೀಲರ ವೇಷದಲ್ಲಿ ಕೋರ್ಟಿಗೆ ಬಂದ ‘ಬನಶಂಕರಿ’ ಹಂತಕರುಬೆಳಗ್ಗೆ 37ನೇ ಎಸಿಎಂಎಂ ಕೋರ್ಟ್ ಆವರಣದಲ್ಲಿ ವಕೀಲರ ಸೋಗಿನಲ್ಲಿ ಏಳು ಮಂದಿ ಆರೋಪಿಗಳು ಪ್ರತ್ಯಕ್ಷರಾಗಿದ್ದಾರೆ.
ಜುಲೈ 2 ರಂದು ಬನಶಂಕರಿ ಮೆಟ್ರೋ ಸ್ಟೇಷನ್ ಬಳಿ ಫೈನಾನ್ಸಿಯರ್ ಆಗಿದ್ದ ಲಕ್ಕಸಂದ್ರ ನಿವಾಸಿ‌ ಮದನ್​ನನ್ನು ಹಿಂಬಾಲಿಸಿ ಮೂರು ಬೈಕ್​ನಲ್ಲಿ ಬಂದು ಆರೋಪಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು.‌ ಹತ್ಯೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕಳೆದ ಎರಡು ವರ್ಷಗಳ ಹಿಂದೆ ಚನ್ನರಾಯಪಟ್ಟಣದ ರೌಡಿಶೀಟರ್​ ಲಿಂಗನ ಕೊಲೆಗೆ‌ ಮದನ್ ಫೈನಾನ್ಸ್ ಮಾಡಿದ್ದ ಎನ್ನಲಾಗುತ್ತಿದೆ.

 

ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆ ಎಂಬ ಅಂಶ‌ ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ. ಕೊಲೆ‌ ಮಾಡಿ ಪೊಲೀಸರಿಗೆ ಸುಳಿವು ಸಿಗದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳು ಇಂದು ಬೆಳಗ್ಗೆ ಕೋರ್ಟ್ ಮುಂದೆ ವಕೀಲರ ವೇಷದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಪೊಲೀಸರ ಗುಂಡೇಟಿನಿಂದ ತಪ್ಪಿಸಿಕೊಳ್ಳಲು‌ ಈ ಪ್ಲ್ಯಾನ್ ಮಾಡಿಕೊಂಡಿದ್ದರಾ? ಎಂಬ ಅನುಮಾನ ವ್ಯಕ್ತವಾಗಿದೆ. ಕೋವಿಡ್ ನಿಯಮ‌ ಪ್ರಕಾರ ಆರೋಪಿಗಳಿಗೆ ನ್ಯಾಯಾಲಯ ಪ್ರವೇಶ ನಿರಾಕರಣೆ ಹಿನ್ನೆಲೆಯಲ್ಲಿ‌ ಜಯನಗರ ಪೊಲೀಸರು ಸ್ಥಳದಲ್ಲೇ ಬಂಧಿಸಿ ಹೆಚ್ಚಿನ ವಿಚಾರಣೆಗೆ‌ ಒಳಪಡಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ಇಂದು ಬೆಳಗಾವಿ, ವಿಜಯಪುರದಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದೆ

Spread the loveಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ ಹವಾಮಾನ ಹೇಗಿದೆ? ಎಂಬುದನ್ನು ಇಲ್ಲಿ ಹೇಳಲಾಗಿದೆ. ಹವಾಮಾನ ವರದಿಗಳ ಪ್ರಕಾರ ಬೆಂಗಳೂರು ಚಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ