Breaking News

ಮುಂದಿನ ವಾರ ಚಿತ್ರಮಂದಿರಗಳನ್ನು ತೆರೆಯಲು ಸಿಎಂ ಭರವಸೆ

Spread the love

ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಜಯರಾಜ್ ನೇತೃತ್ವದ ನಿಯೋಗವು ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿ ಚಿತ್ರ ಮಂದಿರಗಳನ್ನು ತೆರೆಯಲು ಅವಕಾಶ ಮಾಡಿಕೊಡುವಂತೆ ಮನವಿ‌ ಮಾಡಿದೆ.

ಈ ವೇಳೆ ಚಿತ್ರಮಂದಿರಗಳನ್ನು ಮುಂದಿನ ವಾರ ತೆರೆಯಲು ಸಿಎಂ ಅನುವು ಮಾಡಿಕೊಟ್ಟಿದ್ದಾರೆ ಎಂದು ತಿಳಿಸಲಾಗಿದೆ. ಅಲ್ಲದೆ ಒಳಾಂಗಣ ಚಿತ್ರೀಕರಣಕ್ಕೂ ಅನುಮತಿ ಕೊಡುವ ಭರವಸೆಯನ್ನು ಸಿಎಂ ನೀಡಿದ್ದಾರೆ.

ಮುಂದಿನ ವಾರ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಿರುವ ಸಿಎಂ ಷರತ್ತು ಬದ್ಧ ಅನುಮತಿ‌ಗೆ ಅವಕಾಶ ನೀಡಿದ್ದಾರೆ. ಇನ್ನು ಶೇ.100 ರಷ್ಟು ಸೀಟುಗಳ ಭರ್ತಿಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ