Breaking News
Home / ರಾಜಕೀಯ / ಕೆಎಸ್ಸಾರ್ಟಿಸಿ ಬಸ್​ ಟಿಕೆಟ್ ದರ ಹೆಚ್ಚುತ್ತಾ? ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದೇನು?

ಕೆಎಸ್ಸಾರ್ಟಿಸಿ ಬಸ್​ ಟಿಕೆಟ್ ದರ ಹೆಚ್ಚುತ್ತಾ? ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದೇನು?

Spread the love

ಮೈಸೂರು: ಬಸ್​ ಟಿಕೆಟ್​ ದರ ಏರಿಕೆ ಮಾಡುವಂತೆ ನಿಗಮಗಳಿಂದ ಪ್ರಸ್ತಾವನೆ ಬಂದಿದೆ. ಆದರೆ ಕರೊನಾ ಸಂಕಷ್ಟ ಇರುವ ಕಾರಣ ಸದ್ಯಕ್ಕೆ ಬೆಲೆ ಏರಿಕೆ ಮಾಡಲ್ಲ. ಈಗಷ್ಟೇ ಅನ್‌ಲಾಕ್ ಆಗಿದೆ. ಜನರಿಗೆ ಈಗಲೂ ಬಸ್‌ನಲ್ಲಿ ಓಡಾಡಿದರೆ ಕರೊನಾ ಬರುತ್ತೆ ಅನ್ನುವ ಭಯ ಇದೆ. ಜನರಿಗೂ ಲಾಕ್‌ಡೌನ್‌ನಿಂದಾಗಿ ತೊಂದರೆ ಆಗಿದೆ. ಇಂತಹ ಸಂದರ್ಭದಲ್ಲಿ ಟಿಕೆಟ್ ದರ ಏರಿಸಿದರೆ ಇನ್ನಷ್ಟು ಸಮಸ್ಯೆ ಆಗುತ್ತೆ. ಆದ್ದರಿಂದ ಕೆಎಸ್‌ಆರ್‌ಟಿಸಿ ಬಸ್​ ಟಿಕೆಟ್​ ದರ ಏರಿಕೆ ಮಾಡುತ್ತಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ಸಾರಿಗೆ ನೌಕರರು 9 ಬೇಡಿಕೆ ಮುಂದಿಟ್ಟಿದ್ದರು. 8 ಬೇಡಿಕೆ ಈಡೇರಿಸಿದ್ದೇವೆ. ವೇತನ ಪರಿಷ್1132496ಕರಣೆ ಮಾಡಬೇಕು ಅಂತ ಕೇಳುತ್ತಿದ್ದಾರೆ. ಲಾಕ್‌ಡೌನ್‌ನಿಂದಾಗಿ ನಿಗಮಕ್ಕೆ 4000 ಕೋಟಿ ರೂ. ನಷ್ಟ ಆಗಿದೆ. ಸಾಮಾಜಿಕ ಅಂತರ ಕಾಪಾಡಲು ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಇದೆ. ಈಗ ಬರುತ್ತಿರುವ ಆದಾಯ ಇಂಧನಕ್ಕೂ ಸಾಲುತ್ತಿಲ್ಲ. ನಿಗಮಕ್ಕೆ ಆದಾಯ ಬರಲು ಶುರುವಾದ ನಂತರ ವೇತನ ಪರಿಷ್ಕರಣೆ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.


Spread the love

About Laxminews 24x7

Check Also

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Spread the love ಕಾಸರಗೋಡು: ಕೇರಳದ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದ ಅಣಕು ಮತದಾನ ವೇಳೆ ಬಿಜೆಪಿ ಪರವಾಗಿ ಹೆಚ್ಚು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ