ನವದೆಹಲಿ : ಇಂದು (ಬುಧವಾರ) ಸಂಜೆ ಕೇಂದ್ರ ಸಚಿವರ ಪರಿಷತ್ತಿನ ಪುನರ್ರಚನೆ ಮತ್ತು ವಿಸ್ತರಣೆಯ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವ್ರು ತಮ್ಮ ಅಧಿಕೃತ ನಿವಾಸದಲ್ಲಿ ಸಚಿವ ಹುದ್ದೆಯ ಸಂಭಾವ್ಯರನ್ನ ಭೇಟಿಯಾದರು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಧಾನಿ ನಿವಾಸದಲ್ಲಿ ಉಪಸ್ಥಿತರಿದ್ದರು.
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೊರೊನಾ ಅವಧಿಯಲ್ಲಿ ಆರೋಗ್ಯ ಸಚಿವಾಲಯ ಗುರಿಯಾಗಿದ್ದು, ಮೋದಿ ಸರ್ಕಾರದ ಮೇಲೆ ಪ್ರಶ್ನೆಗಳನ್ನ ಎತ್ತಲಾಗಿತ್ತು. ಇದೇ ಆರೋಗ್ಯ ಸಚಿವರ ರಾಜೀನಾಮೆಗೆ ಕಾರಣವಾಗಿರ್ಬೋದು ಎಂದು ಹೇಳಲಾಗ್ತಿದೆ.
ಇನ್ನು ರಮೇಶ್ ಪೋಖ್ರಿಯಲ್, ಸಂತೋಷ್ ಗಂಗ್ವಾರ್, ಡೆಬೊಸ್ರಿ ಚೌಧರಿ, ಸದಾನಂದ ಗೌಡ ಅವರನ್ನ ಸಂಪುಟದಿಂದ ಬಿಡುಗಡೆ ಮಾಡಲಾಗಿದೆ. ಇದಕ್ಕೂ ಮುನ್ನ, ತವಾರ್ಚಂದ್ ಗೆಹ್ಲೋಟ್ ಅವರನ್ನ ರಾಜ್ಯಪಾಲರನ್ನಾಗಿ ಮಾಡಲಾಗಿದೆ. ಆದ್ದರಿಂದ ಅವರು ಕೂಡ ಸಂಪುಟದಿಂದ ಹೊರಗುಳಿದಿದ್ದಾರೆ. ರಾಜ್ಯ ಶಿಕ್ಷಣ ಸಚಿವ ಸಂಜಯ್ ಧೋತ್ರೆ ಕೂಡ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.
ಮಾಹಿತಿಯ ಪ್ರಕಾರ, ಅನಾರೋಗ್ಯದಿಂದಾಗಿ ರಮೇಶ್ ಪೋಖ್ರಿಯಲ್ ನಿಶಾಂಕ್ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ತೆಗೆದುಹಾಕಲಾಗಿದೆ.