Breaking News

ಗೋಲಿಬಾರ್ ವೇಳೆ ಪೊಲೀಸ್​​​ ಮನೆಯವರ ಅತ್ಯಾಚಾರ ಮಾಡುವಂತೆ ಪೋಸ್ಟ್​: ಆರೋಪಿ ಬಂಧನ

Spread the love

ಮಂಗಳೂರು: ಪೊಲೀಸರ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಎಎ ಮತ್ತು ಎನ್‌ಆರ್​​ಸಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ನಡೆದ ಗೋಲಿಬಾರ್ ಹಿನ್ನೆಲೆಯಲ್ಲಿ ಪೊಲೀಸರ ಮನೆಯ ಮಹಿಳೆಯರನ್ನು ಅತ್ಯಾಚಾರ ಮಾಡಿ ಸುಡಬೇಕು ಎಂದು ಫೇಸ್​​​​ಬುಕ್​ನಲ್ಲಿ ಪೋಸ್ಟ್ ಹಾಕಿದ್ದಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಾಲವ್ವನ ಹಳ್ಳಿಯ ಯೋಗಿ ಯಾನೆ ಯೋಗೇಶ್.ಎಸ್ (28) ಬಂಧಿತ ಆರೋಪಿ. 2019ರಲ್ಲಿ ಸಿಎಎ ಮತ್ತು ಎನ್​​ಆರ್​​ಸಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್ ನಡೆದು ಇಬ್ಬರು ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಯೋಗೇಶ್ ಎಂಬಾತ ಫೇಸ್‌ಬುಕ್‌ ಖಾತೆಯಲ್ಲಿ ಪೊಲೀಸರ ಮನೆಯ ಮಹಿಳೆಯರನ್ನು ಅವರ ಮನೆಗೆ ನುಗ್ಗಿ ಅತ್ಯಾಚಾರ ಮಾಡಿ ಸುಟ್ಟು ಹಾಕಬೇಕು ಎಂದು ಪೋಸ್ಟ್ ಮಾಡಿದ್ದ. ಇದನ್ನು ಮನಸುಗಳ ಮಾತು ಮಧುರ ಎಂಬ ಫೇಸ್‌ಬುಕ್‌ ಪೇಜ್​​​ಗೆ ಟ್ಯಾಗ್ ಮಾಡಿ ಅದರ ಸ್ಕ್ರೀನ್ ಶಾಟ್ ತೆಗೆದು ವಾಟ್ಸಾಪ್ ಮೂಲಕ ಪ್ರಸಾರ ಮಾಡಲಾಗಿತ್ತು.

ಇದು ಪೊಲೀಸರ ಕರ್ತವ್ಯಕ್ಕೆ ಅಡ್ಡಿಯುಂಟು ಮಾಡಲು ಮತ್ತು ಪೊಲೀಸ್ ಕುಟುಂಬಸ್ಥರ ವಿರುದ್ಧ ಘೋರಾಪರಾಧ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ಮಾಡಲಾಗಿದೆ ಎಂದು ಮಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯೋಗೇಶ್​​​​ನನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ