Breaking News

ಲಂಚ ಪಡೆದ ಆರೋಪ: ಬಿಎಸ್‌ವೈ ವಿರುದ್ಧದ ದೂರು ಇಂದು ಭವಿಷ್ಯ

Spread the love

ಬೆಂಗಳೂರು: ಗುತ್ತಿಗೆದಾರ ಚಂದ್ರಕಾಂತ್‌ ರಾಮಲಿಂಗಂ ಬಳಿ ₹ 12.5 ಕೋಟಿ ಲಂಚ ಪಡೆದ ಆರೋಪದ ಮೇಲೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಅವರ ಮಗ ಬಿ.ವೈ. ವಿಜಯೇಂದ್ರ ಮತ್ತು ಇತರರ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಸಲ್ಲಿಸಿರುವ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸುವ ಕುರಿತು ಚುನಾಯಿತ ಪ್ರತಿನಿಧಿಗಳ ಪ್ರಕರಣಗಳ ವಿಶೇಷ ನ್ಯಾಯಾಲಯ ಗುರುವಾರ ಆದೇಶ ಪ್ರಕಟಿಸಲಿದೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿರುವ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಬೇಕೆ? ಬೇಡವೆ? ಎಂಬುದರ ಕುರಿತು ಜೂನ್‌ 30ರಂದು ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಧೀಶ ಬಿ. ಜಯಂತ್‌ ಕುಮಾರ್‌, ಆದೇಶ ಕಾಯ್ದಿರಿಸಿದ್ದರು. ಗುರುವಾರ ನ್ಯಾಯಾಲಯ ಆದೇಶ ಪ್ರಕಟಿಸಲಿದ್ದು, ಪ್ರಕರಣದ ಭವಿಷ್ಯ ನಿರ್ಧಾರವಾಗಲಿದೆ.

ಯಡಿಯೂರಪ್ಪ, ವಿಜಯೇಂದ್ರ ಅವರ ಮೊಮ್ಮಗ ಶಶಿಧರ ಮರಡಿ, ಅಳಿಯ ಸಂಜಯ್‌ ಶ್ರೀ, ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ, ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌, ಮೈಸೂರು ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ. ಪ್ರಕಾಶ್, 37 ಕ್ರೆಸೆಂಟ್ ಹೋಟೆಲ್‌ ಮಾಲೀಕ ಕೆ. ರವಿ ಮತ್ತು ವಿರೂಪಾಕ್ಷ‍ಪ್ಪ ಯಮಕನಮರಡಿ ಅವರನ್ನು ಆರೋಪಿಗಳೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ