Breaking News

ಧಾರವಾಡ : ಬೀದಿ ನಾಯಿಗಳ ದಾಳಿಗೆ ಬಾಲಕ ಬಲಿ

Spread the love

ಧಾರವಾಡ: ಕಟ್ಟಡ ಕಾಮಗಾರಿ ಕೆಲಸಕ್ಕೆ ಬಂದ ಪಾಲಕರೊಂದಿಗೆ ಬಂದಿದ್ದ 6 ವರ್ಷದ ಬಾಲಕ ಬೀದಿನಾಯಿಗಳಿಗೆ ಬಲಿಯಾಗಿದ್ದಾನೆ.

ಧಾರವಾಡ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ಕಟ್ಟಡವೊಂದರ ಕಾಮಗಾರಿ ನಡೆಯುತ್ತಿತ್ತು. ರಾಯಚೂರು ಜಿಲ್ಲೆಯ ಲಿಂಗಸೂರು ಮೂಲದ ಗೋಪಾಲ್ ಮತ್ತು ಚನ್ನಮ್ಮ ದಂಪತಿ ಕೆಲಸಕ್ಕೆಂದು ನವಲೂರಿಗೆ ಬಂದಿದ್ದರು. ಜತೆಯಲ್ಲಿ 6 ವರ್ಷದ ಮಗ ಬಾಬೂಲ್ ರಾಠೋಡನನ್ನೂ ಕರೆತಂದಿದ್ದರು.

ಎಂದಿನಂತೆ ಗುರುವಾರ ಪೋಷಕರರು ಕೆಲಸ ಮಾಡುತ್ತಿದ್ದರು. ಬೆಳಗ್ಗೆ ತಿಂಡಿ ತಿನ್ನಲೆಂದು ಕೆಲಸದ ಜಾಗದಲ್ಲಿ ಬಾಲಕನ್ನು ಬಿಟ್ಟು ಪಾಲಕರು ಹೋಗಿದ್ದರು. ಅಲ್ಲೇ ಆಟವಾಡಿಕೊಂಡಿದ್ದ ಬಾಲಕನ ಮೇಲೆ 8 ನಾಯಿಗಳು ಏಕಾಏಕಿ ದಾಳಿ ಮಾಡಿ ಕೊಂದಿವೆ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ