ಧಾರವಾಡ: ಕಟ್ಟಡ ಕಾಮಗಾರಿ ಕೆಲಸಕ್ಕೆ ಬಂದ ಪಾಲಕರೊಂದಿಗೆ ಬಂದಿದ್ದ 6 ವರ್ಷದ ಬಾಲಕ ಬೀದಿನಾಯಿಗಳಿಗೆ ಬಲಿಯಾಗಿದ್ದಾನೆ.
ಧಾರವಾಡ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ಕಟ್ಟಡವೊಂದರ ಕಾಮಗಾರಿ ನಡೆಯುತ್ತಿತ್ತು. ರಾಯಚೂರು ಜಿಲ್ಲೆಯ ಲಿಂಗಸೂರು ಮೂಲದ ಗೋಪಾಲ್ ಮತ್ತು ಚನ್ನಮ್ಮ ದಂಪತಿ ಕೆಲಸಕ್ಕೆಂದು ನವಲೂರಿಗೆ ಬಂದಿದ್ದರು. ಜತೆಯಲ್ಲಿ 6 ವರ್ಷದ ಮಗ ಬಾಬೂಲ್ ರಾಠೋಡನನ್ನೂ ಕರೆತಂದಿದ್ದರು.
ಎಂದಿನಂತೆ ಗುರುವಾರ ಪೋಷಕರರು ಕೆಲಸ ಮಾಡುತ್ತಿದ್ದರು. ಬೆಳಗ್ಗೆ ತಿಂಡಿ ತಿನ್ನಲೆಂದು ಕೆಲಸದ ಜಾಗದಲ್ಲಿ ಬಾಲಕನ್ನು ಬಿಟ್ಟು ಪಾಲಕರು ಹೋಗಿದ್ದರು. ಅಲ್ಲೇ ಆಟವಾಡಿಕೊಂಡಿದ್ದ ಬಾಲಕನ ಮೇಲೆ 8 ನಾಯಿಗಳು ಏಕಾಏಕಿ ದಾಳಿ ಮಾಡಿ ಕೊಂದಿವೆ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.