Breaking News
Home / ರಾಜಕೀಯ / ಇಂದು ಕೊರೊನಾ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ

ಇಂದು ಕೊರೊನಾ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ

Spread the love

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿತರಾದ 28.64 ಲಕ್ಷ ಮಂದಿಯಲ್ಲಿ 27.90 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ.

ಹೊಸದಾಗಿ 2,530 ಮಂದಿ ಕೋವಿಡ್ ಪೀಡಿತರಾಗಿರುವುದು ಹಾಗೂ ಸೋಂಕಿತರಲ್ಲಿ 3,344 ಮಂದಿ ಗುಣಮುಖರಾಗಿರುವುದು ಗುರುವಾರ ದೃಢಪಟ್ಟಿದೆ.

ಒಂದು ದಿನದ ಅವಧಿಯಲ್ಲಿ 1.57 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, ಶೇ 1.60ರಷ್ಟು ಸೋಂಕು ದೃಢ ಪ್ರಮಾಣ ವರದಿಯಾಗಿದೆ. ಬೆಂಗಳೂರಿನಲ್ಲಿ 514 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 500ರ ಗಡಿಯೊಳಗೆ ವರದಿಯಾಗಿವೆ. 14 ಜಿಲ್ಲೆಗಳಲ್ಲಿ ಈ ಸಂಖ್ಯೆ ಎರಡಂಕಿ ಹಾಗೂ 7 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದ್ದು, 38,729 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ‌

ಕೋವಿಡ್ ಮರಣ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದ್ದು, ಸೋಂಕಿತರಲ್ಲಿ 62 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮರಣ ಪ್ರಮಾಣ ದರವು ಶೇ 2.45 ರಷ್ಟು ವರದಿಯಾಗಿದೆ. ರಾಜ್ಯದ 16 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ಖಚಿತಪಟ್ಟಿವೆ.

ಬಳ್ಳಾರಿಯಲ್ಲಿ 11, ಬೆಂಗಳೂರಿನಲ್ಲಿ 9, ದಕ್ಷಿಣ ಕನ್ನಡದಲ್ಲಿ 8, ಮೈಸೂರಿನಲ್ಲಿ 6, ಶಿವಮೊಗ್ಗ ಹಾಗೂ ಧಾರವಾಡದಲ್ಲಿ ತಲಾ 5 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ 5ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮರಣ ಪ್ರಕರಣಗಳು ವರದಿಯಾಗಿವೆ. ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 35,663ಕ್ಕೆ ತಲುಪಿದೆ.

 


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ