Breaking News

ದಾರಿಯಲ್ಲಿ ಹೋಗುವ ದಾಸಪ್ಪ ಸಿಎಂ ಆಗಿದ್ದರನೂ ಇಂತಹ ಕೆಲಸಗಳನ್ನ ಮಾಡಿಯೇ ಮಾಡುತ್ತಾರೆ : ಕಿಡಿಕಾರಿದ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್

Spread the love

ಬೆಂಗಳೂರು: ದಿವಂಗತ ರೆಬಲ್ ಸ್ಟಾರ್​ ಅಂಬರೀಶ್ ವಿರುದ್ಧ ಮಾಜಿ ಸಿಎಂ ಎಚ್.​​ಡಿ.ಕುಮಾರಸ್ವಾಮಿ ಹೇಳಿಕೆಗಳಿಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಅಂಬರೀಶ್ ಅಣ್ಣನ ಬಗ್ಗೆ ಯಾರು ಮಾತನಾಡಿಲ್ಲ ಹೇಳಿ? ದಾರಿಯಲ್ಲಿ ಹೋಗುವ ದಾಸಪ್ಪ ಸಿಎಂ ಆಗಿದ್ದರನೂ ಇಂತಹ ಕೆಲಸಗಳನ್ನ ಮಾಡಿಯೇ ಮಾಡುತ್ತಾರೆ.

ಸರ್ಕಾರದ ಗೌರವದೊಂದಿಗೆ ಕಳುಹಿಸಿಕೊಟ್ಟಿದ್ದೀರಿ ಎಂದು ಹೇಳ್ತೀರಿ. ಮೊನ್ನೆ ಸಂಚಾರಿ ವಿಜಯ್ ಮೃತಪಟ್ಟಾಗಲೂ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ ಮಾಡಲಾಗಿದೆ. ನೀವು ಸ್ವಂತವಾಗಿ ಏನು ಮಾಡಿದ್ದೀರಿ? ಅದರಿಂದ ನಿಮಗೆ ಒಂದಿಷ್ಟು ಲಾಭವಾಗಿದೆ. ಪುಣ್ಯ ಬಂದಿದೆ ಎಂದು ಹರಿಹಾಯ್ದರು.


Spread the love

About Laxminews 24x7

Check Also

ಮಕ್ಕಳ ಹಕ್ಕುಗಳ ರಕ್ಷಣೆ ಪೊಲೀಸರ ಆದ್ಯ ಕರ್ತವ್ಯ; ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಲು ಪೊಲೀಸರಿಗೆ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕರೆ

Spread the loveಬೆಂಗಳೂರು : ಮಕ್ಕಳ ಹಕ್ಕುಗಳ ರಕ್ಷಣೆಯ ಉಲ್ಲಂಘನೆ ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಿ, ವರದಿ ಮಾಡಿಕೊಳ್ಳುವ ಮೂಲಕ ಮಕ್ಕಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ