Home / ಜಿಲ್ಲೆ / ಬೆಂಗಳೂರು / ಕೆಆರ್​​ಎಸ್​ ವಾರ್​ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ

ಕೆಆರ್​​ಎಸ್​ ವಾರ್​ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ

Spread the love

ರಾಜ್ಯದಲ್ಲಿ ಕನ್ನಂಬಾಡಿ ಕಾಳಗ ದಿನಕ್ಕೊಂದು ಆಯಾಮವನ್ನ ಪಡೆಯುತ್ತಿದೆ. ಡ್ಯಾಂ ಸುರಕ್ಷತೆ ವಿಚಾರವಾಗಿ ಶುರುವಾದ ವಿವಾದ ಇದೀಗ ವೈಯಕ್ತಿಕ ಹೇಳಿಕೆ ನೀಡುವವರೆಗೂ ಬಂದು ನಿಂತಿದೆ. ಇಂದು ಬೆಂಗಳೂರಿನಲ್ಲಿ ಕೆಆರ್​ಎಸ್​ ಡ್ಯಾಂ ವಿಚಾರವಾಗಿ ಸಂಸದೆ ಸುಮಲತಾ ಹಾಗೂ ಹೆಚ್​ಡಿಕೆ ನಡುವಿನ ಸಂಘರ್ಷದ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ ನಮ್ಮ ಡ್ಯಾಂ ಸುರಕ್ಷಿತವಾಗಿದೆಯಾ ಅನ್ನೋದಷ್ಟೇ ಮುಖ್ಯ ಎಂದು ಹೇಳಿದ್ರು.

ಸಂಸದೆ ಸುಮಲತಾ ಅಂಬರೀಶ್​ ಹಾಗೂ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ನಡುವೆ ನಡೆಯುತ್ತಿರುವ ವೈಯಕ್ತಿಕ ಹೇಳಿಕೆಗಳ ವಿಚಾರವಾಗಿ ನಾನು ಏನನ್ನೂ ಹೇಳಲಾರೆ. ನಮಗೆ ಡ್ಯಾಂ ಸುರಕ್ಷಿತವಾಗಿರೋದಷ್ಟೇ ಮುಖ್ಯ. ಇದಕ್ಕೆ ಟೆಕ್ನಿಕಲ್ ಟೀಂ ವರದಿ ನೀಡಬೇಕು. ಈ ಹಿಂದೆ ಕೆಆರ್​ಎಸ್​ ಡ್ಯಾಂನ್ನು ಪರೀಕ್ಷೆ ಮಾಡಲಾಗಿತ್ತು. ಆಗ ಡ್ಯಾಂನಲ್ಲಿ 70 ವರ್ಷ ಹಳೆಯದಾದ ಗೇಟ್​ ಇದ್ದಿದ್ದರಿಂದ ನೀರು ಪೋಲಾಗುತ್ತಿತ್ತು. ಬಳಿಕ 2011ರಲ್ಲಿ ನಾವು ಹೊಸ ಗೇಟ್​ನ್ನು ಹಾಕಿಸಿದ್ದೇವು. ಗೇಟ್​ ಸರಿ ಮಾಡಿಸಿದ್ರೆ ಡ್ಯಾಂ ಸುರಕ್ಷಿತವಾಗಿ ಇರುತ್ತದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Spread the love ಬೆಂಗಳೂರು: ಒಂದು ತಿಂಗಳಿಂದ ನಡೆಯುತ್ತಿದ್ದ ಅಬ್ಬರದ ಪ್ರಚಾರಕ್ಕೆ ಬುಧವಾರ ತೆರೆ ಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ