Breaking News

ಜು. 14ರ ವರೆಗೆ ಭಾರೀ ಮಳೆ ನಿರೀಕ್ಷೆ : ಹವಾಮಾನ ಇಲಾಖೆ ಮುನ್ಸೂಚನೆ

Spread the love

ಬಂಗಾಲಕೊಲ್ಲಿಯ ಪಶ್ಚಿಮ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಇದರ ಪ್ರಭಾವದಿಂದ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜು. 14ರ ವರೆಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಜು. 11ರಂದು ರೆಡ್‌, ಜು. 12 ಮತ್ತು 13ರಂದು ಆರೆಂಜ್‌ ಹಾಗೂ ಜು. 14ರಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಜು. 14ರ ವರೆಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.


Spread the love

About Laxminews 24x7

Check Also

ಯುಪಿಎಸ್​​ಸಿ ಪರೀಕ್ಷೆಯಲ್ಲಿ ಹಾಸನದ ಕೆ.ಎಸ್. ಧನ್ಯಗೆ 982ನೇ ರ‍್ಯಾಂಕ್

Spread the loveಹಾಸನ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್​​ಸಿ) ಈ ಸಾಲಿನ ಪರೀಕ್ಷೆಯಲ್ಲಿ ಸಕಲೇಶಪುರ ಪಟ್ಟಣದ ಮಲ್ಲಿಕಾರ್ಜುನನಗರದ ನಿವಾಸಿ ಕೆ.ಎಸ್.ಧನ್ಯ 982ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ