Breaking News

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಮುನ್ಸೂಚನೆ ಬೆಳಗಾವಿ ಜಿಲ್ಲೆಯ ಜನರಿಗೆ ಆತಂಕ ಶುರು

Spread the love

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ಆತಂಕ ಶುರುವಾಗಿದೆ.

ಜುಲೈ 9ರಿಂದ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ನದಿ ಪಾತ್ರದ ಜುಗುಳ, ಮಂಗಾವತಿ, ಶಹಾಪೂರ ಕುಸನಾಳ, ಮೊಳವಾಡ, ಉಗಾರ್ ಕೆಎಚ್, ಬಣಜವಾಡ ಹಾಗೂ ಕಿತ್ತೂರ ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಜಿಲ್ಲಾಡಳಿತ ಎಚ್ಚರಿಕೆಯನ್ನ ನೀಡ್ತಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಆಗುವ ಮಳೆಯಿಂದ ಕೃಷ್ಣಾ ನದಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಹ ಉಂಟಾಗಿ ಅಪಾರ ಹಾನಿ ಸೃಷ್ಟಿಸುತ್ತದೆ. ಪ್ರತಿ ಬಾರಿ ಪ್ರವಾಹ ಬಂದಾಗ ಎಚ್ಚೆತ್ತುಕೊಳ್ಳುತ್ತಿದ್ದ ಅಧಿಕಾರಿಗಳು, ಈಗ ಪ್ರವಾಹ ಮುನ್ನವೇ ಡಂಗುರ ಸಾರಿ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ