ಕಾರವಾರ : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ನಿನ್ನೆ ರಾತ್ರಿಯಿಂದ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ.
ಜಿಲ್ಲೆಯ ಕಾರವಾರ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ನಿನ್ನೆ ಮಧ್ಯಾಹ್ನದಿಂದ ಜಿಲ್ಲೆಯಲ್ಲಿ ವರ್ಷಧಾರೆ ಆರಂಭವಾಗಿದ್ದು, ಇಂದು ಕೂಡ ಮುಂದುವರೆದಿದೆ.
ಕಾರವಾರದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳಲ್ಲಿ ನೀರು ತುಂಬಿಕೊಂಡಿರುವ ಕಾರಣ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಇನ್ನು ಅರಬ್ಬೀ ಸಮುದ್ರದಲ್ಲಿ ಕಡಲಬ್ಬರ ಜೋರಾಗಿದ್ದು ಭಾರಿ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಜಿಲ್ಲಾಡಳಿತ ಕಡಲತೀರಗಳಿಗೆ ಯಾರು ತೆರಳದಂತೆ ಸೂಚಿಸಿದೆ.