Breaking News

.ಯುವಕರ ಗುಂಪು ಧಾಬಾ ಮಾಲೀಕನ ಮೇಲೆ ಹಲ್ಲೆ ಧಾಬಾ ಮಾಲೀಕನ ಮರ್ಡರ್…

Spread the love

ಬೆಳಗಾವಿ-ಹಣದ ವ್ಯೆವಹಾರಕ್ಕೆ ಸಮಂಧಿಸಿದಂತೆ
ಇಬ್ಬರ ನಡುವೆ ನಡೆದ ಜಗಳ ಬಿಡಿಸಲು ಹೋದ ದಾಭಾ ಮಾಲೀಕನ ಮೇಲೆ ಹಲ್ಲೆ ನಡೆದಿದ್ದು
ಆಸ್ಪತ್ರೆಗೆ ಸಾಗಿಸುವ‌ ದಾರಿ ಮಧ್ಯ ಧಾಬಾ ಮಾಲೀಕ ಸಾವನ್ನೊಪ್ಪಿದ ಘಟನೆ ಕಿತ್ತೂರು ತಾಲ್ಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ಎಂ ಕೆ ಹುಬ್ಬಳ್ಳಿ ಗ್ರಾಮದ ಪಂಚವಟಿ ಧಾಭಾ ಮಾಲೀಕ,ಪ್ರಕಾಶ ನಾಗನೂರು(38) ಮೃತಪಟ್ಟಿದ್ದು ನಿನ್ನೆ ಸಂಜೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

1500 ರೂ ಹಣದ ವ್ಯೆವಹಾರಕ್ಕೆ ಸಮಂಧಿಸಿದಂತೆ,ಯುವಕರ ಗುಂಪೊಂದು ಹಣ ಕೇಳಲು ಧಾಬಾಗೆ ಹೋಗಿದೆ ಈ ಸಂಧರ್ಭದಲ್ಲಿ ಗಲಾಟೆಯಾಗಿದೆ.ಯುವಕರ ಗುಂಪು ಧಾಬಾ ಮಾಲೀಕನ ಮೇಲೆ ಹಲ್ಲೆ ನಡೆಸಿದ ಪರಿಣಾಮ ಆತನನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ.

ಎರಡು ಗುಂಪುಗಳ ನಡೆವೆ ಮಾತಿನ ಚಕಮಕಿ ನಡೆದ ನಂತರ ಮಾರಾಮಾರಿ ನಡೆದಿದೆ.
ಜಗಳ ಬಿಡಿಸುವ ಮದ್ಯ ಪ್ರವೇಶ ಮಾಡಿದ್ದ ಪ್ರಕಾಶ ನಾಗನೂರು ಎಂಬಾತನ ಮೇಲೆ,
ಯುವಕರ ಗುಂಪಿನಿಂದ ಮಾರಣಾಂತಿಕ ಹಲ್ಲೆಗೊಳಗಾದ ಹಿನ್ನೆಲೆಯಲ್ಲಿಸಾವನ್ನೊಪ್ಪಿದ್ದಾನೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ