Breaking News
Home / ರಾಜಕೀಯ / ಶಾಸಕ ಅರವಿಂದ ಬೆಲ್ಲದ್ ಪರ ಬ್ಯಾಟ್ ಮಾಡಿದ ಸಚಿವ ಉಮೇಶ್ ಕತ್ತಿ, “ಮುಂದಿನ ಮುಖ್ಯಮಂತ್ರಿ ಬೆಲ್ಲದ್, ನಿರಾಣಿ ಅಥವಾ ನಾನೇ

ಶಾಸಕ ಅರವಿಂದ ಬೆಲ್ಲದ್ ಪರ ಬ್ಯಾಟ್ ಮಾಡಿದ ಸಚಿವ ಉಮೇಶ್ ಕತ್ತಿ, “ಮುಂದಿನ ಮುಖ್ಯಮಂತ್ರಿ ಬೆಲ್ಲದ್, ನಿರಾಣಿ ಅಥವಾ ನಾನೇ

Spread the love

ಧಾರವಾಡ, ಜುಲೈ 12: “ಕರ್ನಾಟಕ ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ, ಮುಂದೆ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಬಹುದು,” ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಉಮೇಶ್ ಕತ್ತಿ ಭವಿಷ್ಯ ನುಡಿದರು.

ಸೋಮವಾರ ಧಾರವಾಡದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಉಮೇಶ್ ಕತ್ತಿ, “ಉತ್ತರ ಕರ್ನಾಟಕಕ್ಕೆ ಅನ್ಯಾಯವಾದರೆ, ಸುಮ್ಮನಿರಲ್ಲ. ಈ ಭಾಗದ ಜನರ ಸಹಕಾರದಿಂದ ಉತ್ತರ ಕರ್ನಾಟಕ ಪ್ರತ್ಯೇಕ ಕಟ್ಟುವುದು ಶತ ಸಿದ್ಧ,” ಎಂದು ಮತ್ತೊಮ್ಮೆ ರಾಜ್ಯ ವಿಭಜನೆಯ ಮಾತುಗಳನ್ನಾಡಿದರು.

“ನಾನು ಎಂಟು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆರು ಇಲಾಖೆಗಳಲ್ಲಿ ಸಚಿವನಾಗಿ ಕೆಲಸ ಮಾಡಿದ ಅನುಭವ ಇದೆ. ಯಾವುದೇ ಕಪ್ಪು ಚುಕ್ಕೆ ಇಲ್ಲ. ಭ್ರಷ್ಟಾಚಾರ ಮಾಡಿಲ್ಲ. ನನಗೂ ಮುಖ್ಯಮಂತ್ರಿ ಆಗುವ ಆಸೆ ಇದೆ,” ಎಂಬ ತಮ್ಮ ಮನದ ಇಂಗಿತ ವ್ಯಕ್ತಪಡಿಸಿದರು.

ಶಾಸಕ ಅರವಿಂದ ಬೆಲ್ಲದ್ ಪರ ಬ್ಯಾಟ್ ಮಾಡಿದ ಸಚಿವ ಉಮೇಶ್ ಕತ್ತಿ, “ಮುಂದಿನ ಮುಖ್ಯಮಂತ್ರಿ ಬೆಲ್ಲದ್, ನಿರಾಣಿ ಅಥವಾ ನಾನೇ ಆಗಬಹುದು. ಶಾಸಕ, ಸಚಿವ, ಮುಖ್ಯಮಂತ್ರಿ ಬಳಿಕ ಪ್ರಧಾನಿ ಆಗುವ ಆಸೆಯೂ ಇದೆ,” ಎಂದು ಹೇಳಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ