ಬೆಳಗಾವಿ: ಚಿಕ್ಕೋಡಿ ತಾಲ್ಲೂಕಿನ ಸದಲಗಾ ಬೋರ್ ಗಾಂವ ರಸ್ತೆಯ ಮೇಲೆ ನೀರಿನ ಸೆಳೆತಕ್ಕೆ ಬೈಕ್ ಸಮೇತವಾಗಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಸ್ಥಳೀಯ ಯುವಕರು ಗುರುವಾರ ರಕ್ಷಣೆ ಮಾಡಿದ್ದಾರೆ.
ರಸ್ತೆಯ ಮೇಲೆ ನೀರಿನ ಹರಿವು ಹೆಚ್ಚಳವಿತ್ತು, ಆದ್ರು ವ್ಯಕ್ತಿ ದ್ವಿಚಕ್ರ ವಾಹನದೊಂದಿಗೆ ಹೊರಟ್ಟಿದ್ದನು. ಸಾಗುತ್ತಿರುವ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಬೈಕ್ ಸಮೇತವಾಗಿ ವ್ಯಕ್ತಿ ಕೊಚ್ಚಿ ಹೋಗುತ್ತಿದ್ದನು. ತಕ್ಷಣ ಗಮನಿಸಿದ ಸ್ಥಳೀಯ ಯುವಕರು ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ.
ಜಿಲ್ಲೆಯಾದ್ಯಂತ ಬಿರುಸಿನ ಮಳೆ ಆರಂಭವಾಗಿರುವುದರಿಂದ ಸೇತುವೆ ಸಂಪೂರ್ಣ ಮುಳುಗಡೆಗೊಂಡಿವೆ. ಇನ್ನೂ ಕೆಲವೆಡೆ ರಸ್ತೆ ಸಂಚಾರ ಬಂದ್ ಆಗಿರುವುದರಿಂದ ಇಂತಹ ಅನಾಹುತಕ್ಕೆ ಕಾರಣವಾಗುತ್ತಿವೆ. ಈ ಹಿನ್ನೆಲೆಯಲ್ಲಿ ನದಿಯ ಪಾತ್ರದ ಜನರು ಎಚ್ಚರಿಕೆ ವಹಿಸಬೇಕಾಗಿರುವದು ಅವಶ್ಯವಾಗಿದೆ.