Breaking News

ಶಾಸಕ ಎಸ್.ರಾಮಲಿಂಗಾ ರೆಡ್ಡಿ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

Spread the love

ಹೈದರಾಬಾದ್: ಟಿಆರ್ ಎಸ್ ಪಕ್ಷದ ಶಾಸಕ ಎಸ್.ರಾಮಲಿಂಗಾ ರೆಡ್ಡಿ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಮಲಿಂಗಾ ರೆಡ್ಡಿಯವರು ದುಬ್ಬಾಕಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

59 ವರ್ಷದ ರಾಮಲಿಂಗಾ ರೆಡ್ಡಿ ಇತ್ತೀಚೆಗೆ ಕೊಂಪಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮೊಳಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆನಾರೋಗ್ಯ ಹಿನ್ನೆಲೆಯಲ್ಲಿ ಶಾಸಕರನ್ನು ರಾತ್ರಿ ಸುಮಾರು 2.30ಕ್ಕೆ ಗಾಚಿಬೌಲಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೆಲಂಗಾಣ ರಾಷ್ಟ್ರೀಯ ಪಕ್ಷದ ಹಿರಿಯ ನಾಯಕರಲ್ಲಿ ರಾಮಲಿಂಗಾ ರೆಡ್ಡಿ ಸಹ ಒಬ್ಬರಾಗಿದ್ದರು. ಶಾಸಕರ ಅಂತಿಮ ವಿಧಿವಿಧಾನಗಳು ದುಬ್ಬಾಕಾ ಕ್ಷೇತ್ರದ ಸ್ವಗ್ರಾಮ ಚಿತ್ತಾಪುರದಲ್ಲಿ ನಡೆಯಲಿವೆ.59 ವರ್ಷದ ರಾಮಲಿಂಗಾ ರೆಡ್ಡಿ ಇತ್ತೀಚೆಗೆ ಕೊಂಪಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮೊಳಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆನಾರೋಗ್ಯ ಹಿನ್ನೆಲೆಯಲ್ಲಿ ಶಾಸಕರನ್ನು ರಾತ್ರಿ ಸುಮಾರು 2.30ಕ್ಕೆ ಗಾಚಿಬೌಲಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೆಲಂಗಾಣ ರಾಷ್ಟ್ರೀಯ ಪಕ್ಷದ ಹಿರಿಯ ನಾಯಕರಲ್ಲಿ ರಾಮಲಿಂಗಾ ರೆಡ್ಡಿ ಸಹ ಒಬ್ಬರಾಗಿದ್ದರು. ಶಾಸಕರ ಅಂತಿಮ ವಿಧಿವಿಧಾನಗಳು ದುಬ್ಬಾಕಾ ಕ್ಷೇತ್ರದ ಸ್ವಗ್ರಾಮ ಚಿತ್ತಾಪುರದಲ್ಲಿ ನಡೆಯಲಿವೆ.

ಶಾಸಕರ ನಿಧನಕ್ಕೆ ಸಂತಾಪ ಸೂಚಿಸಿರುವ ಸಿಎಂ ಕೆ.ಚಂದ್ರಶೇಖರ್ ರಾವ್, ವಿಷಯ ಕೇಳಿ ಮನಸ್ಸು ಭಾರವಾಯ್ತು. ತೆಲಂಗಾಣ ಪರ ಆಂದೋಲನದಲ್ಲಿ ರಾಮಲಿಂಗಾ ರೆಡ್ಡಿ ಪ್ರಮುಖ ನಾಯಕರಾಗಿದ್ದರು. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ