Home / ಜಿಲ್ಲೆ / ದಾವಣಗೆರೆ / ಖಾಲಿ ಜಾಗದಲ್ಲಿ ಗುಡಿಸಲು ಹಾಕಿ, ಕೈಯಲ್ಲಿ ದೊಣ್ಣೆ ಹಿಡಿದು ಡಿ.ಸಿ ಕಚೇರಿ ಮುಂದೆ ಈ ಬಡವರು ಪ್ರತಿಭಟನೆ ನಡೆಸುತ್ತಿರುವುದು ಏಕೆ?

ಖಾಲಿ ಜಾಗದಲ್ಲಿ ಗುಡಿಸಲು ಹಾಕಿ, ಕೈಯಲ್ಲಿ ದೊಣ್ಣೆ ಹಿಡಿದು ಡಿ.ಸಿ ಕಚೇರಿ ಮುಂದೆ ಈ ಬಡವರು ಪ್ರತಿಭಟನೆ ನಡೆಸುತ್ತಿರುವುದು ಏಕೆ?

Spread the love

ದಾವಣಗೆರೆ: ಬಡವರಿಗಾಗಿ ಮೀಸಲಿಟ್ಟ ಸೈಟ್​ಗಳನ್ನು ಬೇರೆಯವರಿಗೆ ನೀಡಲು ಮುಂದಾದ ಮಹಾನಗರ ಪಾಲಿಕೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಖಾಲಿ ಜಾಗದಲ್ಲಿ ತಮ್ಮ ಗುಡಿಸಲು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಬಸಾಪುರ ಹಳ್ಳದ ಬಳಿ ಇರುವ ಜಾಗದಲ್ಲಿ ಬಡವರಿಗೆ ಉಚಿತ ಸೈಟ್​ ನೀಡುವುದಾಗಿ ಹಲವು ವರ್ಷಗಳ ಹಿಂದೆಯೇ ತಿಳಿಸಲಾಗಿತ್ತು. ಹೀಗಾಗಿ ಈ ಭಾಗದ ಜನರು ಮಹಾನಗರ ಪಾಲಿಕೆಗೆ ಅರ್ಜಿ ಸಹ ಸಲ್ಲಿಸಿದ್ದರು. ಆದರೆ ಇವರೆಗೂ ಯಾವುದೇ ಸೈಟ್​ ಜನರ ಪಾಲಾಗಿಲ್ಲ. ಹೀಗಿರುವಾಗ ಧಾರವಾಡ ಮಹಾನಗರ ಪಾಲಿಕೆ ಈ ಜಾಗವನ್ನು ಬೇರೆಯವರಿಗೆ ನೀಡಿದೆ ಎಂಬ ಸುದ್ದಿ ಸಿಕ್ಕಿದ್ದು, ಸಿಡಿದೆದ್ದ ಈ ಭಾಗದ ಜನರು ಖಾಲಿ ಜಾಗದಲ್ಲಿ ಗುಡಿಸಲು ಹಾಕಿ, ಕೈಯಲ್ಲಿ ದೊಣ್ಣೆ ಹಿಡಿದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯ ಬಸಾಪುರ ಹಳ್ಳದ ಬಳಿ ಇರುವ ಜಾಗದಲ್ಲಿ 110 ಸೈಟ್​ಗಳಿವೆ. ಈ ಸೈಟ್​ಗಳನ್ನು ಇಲ್ಲಿನ ಬಡವರಿಗೆ ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಹಂಚಿತ್ತು. ಹೀಗಾಗಿ ನಮ್ಮದೆ ಸೈಟ್ ಎಂದು ಬಹುತೇಕರು ತಿಳಿದುಕೊಂಡಿದ್ದರು. ಆದರೆ ಇತ್ತೀಚಿಗೆ ಮಹಾನಗರ ಪಾಲಿಕೆಯ ಕೆಲ ಅಧಿಕಾರಿಗಳು ಹಣ ಪಡೆದು ಬೇರೆಯವರು, ಅದರಲ್ಲೂ ಒಂದೇ ಮನೆಯವರಿಗೆ ಮೂರು-ನಾಲ್ಕು ಸೈಟ್ ಮಾಡಿದ್ದಾರೆ. ಇದರಿಂದ ಬಡವರಿಗೆ ಸೈಟ್ ಸಿಗುವುದು ಕಷ್ಟವಾಗಿದೆ ಎಂದು ಸ್ಥಳೀಯ ನಿವಾಸಿ ಕರಿಬಸಮ್ಮ ತಿಳಿಸಿದ್ದಾರೆ.

ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಅವರು ಇದೇ ಬಸಾಪುರ ಪ್ರದೇಶದ ಬಡವರಿಗೆ ಸೈಟ್ ನೀಡುವಂತೆ ಆದೇಶ ಮಾಡಿದ್ದರು. ಆ ಪ್ರಕಾರ ಇಲ್ಲಿನ ಜನ ಮಹಾನಗರ ಪಾಲಿಕೆಗೆ ಅರ್ಜಿ ಸಹ ಸಲ್ಲಿಸಿದ್ದರು. ಹಳೇ ಪಟ್ಟಿಯಲ್ಲಿ ಇರುವ ಯಾವುದೇ ಹೆಸರು ಹೊಸ ಪಟ್ಟಿಯಲ್ಲಿ ಇಲ್ಲ. ಈ ಬಗ್ಗೆ ಕೇಳಿದರೆ ಅಧಿಕಾರಿಗಳು ಉತ್ತರ ನೀಡುತ್ತಿಲ್ಲ. ಇದಕ್ಕೆ ಕಾರಣ ಮಹಾನಗರ ಪಾಲಿಕೆಯ ಸಿಬ್ಬಂದಿ ಗೋವಿಂದ್ ನಾಯ್ಕ. 110 ಸೈಟ್​ಗಳಿಗೆ ತಲಾ 110000 ರೂಪಾಯಿ ಎಂದು ಹಣ ಪಡೆದು ಅವರವರ ಹೆಸರಿಗೆ ಮಾಡಿದ್ದಾರೆ. ಆದರೆ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಮಾತ್ರ ಇದರ ಬಗ್ಗೆ ಮಾಹಿತಿ ನೀಡುತ್ತಿಲ್ಲ ಎಂದು ಸ್ಥಳೀಯ ನಿವಾಸಿ ತಾಜ್ ಫೀರ್ ಆರೋಪಿಸಿದ್ದಾರೆ.

ಈ ಹಿಂದೆ ಮನೆಯಲ್ಲಿನ ಚಿನ್ನ ಹಾಗೂ ವಸ್ತುಗಳನ್ನು ಮಾರಾಟ ಮಾಡಿ ಈ ಭಾಗದ ಜನರು ಸೈಟ್​ಗಾಗಿ 30 ರಿಂದ 40 ಸಾವಿರ ರೂಪಾಯಿ ನೀಡಿದ್ದಾರೆ. ಕಳೆದ 13 ವರ್ಷಗಳಿಂದ ಈ ಸೈಟ್​ಗಾಗಿ ಹೋರಾಟ ಮಾಡಲಾಗುತ್ತಿದ್ದೆ. ಕೆಲವರು ಇದೇ ಸ್ಥಳದಲ್ಲಿ ಗೂಡಿಸಲು ಹಾಕಿಕೊಂಡು ಜೀವನ ಸಹ ನಡೆಸುತ್ತಿದ್ದಾರೆ. ಆದರೆ ಇದ್ದಕ್ಕಿದ್ದಂತೆ ಅಧಿಕಾರಿಗಳು ಶಾಮೀಲಾಗಿ ಬೇಕಾದವರಿಗೆ ಸೈಟ್ ಮಾಡಿದ್ದು, ಸ್ಥಳೀಯರನ್ನು ಆಕ್ರೋಶಗೊಳಿಸಿದೆ. ಆದಷ್ಟು ಬೇಗ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಬಡವರ ನೆರವಿಗೆ ದಾವಿಸಬೇಕಿದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ