Breaking News
Home / ಜಿಲ್ಲೆ / ಬೆಂಗಳೂರು / ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 9 ಅಧಿಕಾರಿಗಳಿಗೆ ಬ್ರಷ್ಟಾಚಾರ ನಿಗ್ರಹ ದಳ ಬೆಳ್ಳಂಬೆಳಗ್ಗೆಯೇ ಶಾಕ್

ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 9 ಅಧಿಕಾರಿಗಳಿಗೆ ಬ್ರಷ್ಟಾಚಾರ ನಿಗ್ರಹ ದಳ ಬೆಳ್ಳಂಬೆಳಗ್ಗೆಯೇ ಶಾಕ್

Spread the love

ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 9 ಅಧಿಕಾರಿಗಳಿಗೆ ಬ್ರಷ್ಟಾಚಾರ ನಿಗ್ರಹ ದಳ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದೆ. ಬರೋಬ್ಬರಿ 300ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು 40ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಯಾವೆಲ್ಲಾ ಜಿಲ್ಲೆಯಲ್ಲಿ ದಾಳಿ?

  • ಬೆಂಗಳೂರು
  • ಮೈಸೂರು
  • ಮಂಡ್ಯ
  • ವಿಜಯಪುರ
  • ಮಂಗಳೂರು
  • ಉಡುಪಿ
  • ಕೋಲಾರ
  • ಚಿತ್ರದುರ್ಗ
  • ಬಳ್ಳಾರಿ

ಯಾರೆಲ್ಲಾ ನಿವಾಸ ಹಾಗೂ ಮನೆಗಳ ಮೇಲೆ ದಾಳಿ?

  • ಜಿ. ಶ್ರೀಧರ್ -ಮಂಗಳೂರು ನಗರಾಭಿವೃದ್ಧಿ ಘಟಕ -ಡಿಸಿ ಕಚೇರಿ
  • ಕೃಷ್ಣ.ಎಸ್ -ಹೆಬ್ಸೂರು ಇಇ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ-ಉಡುಪಿ
  • ಆರ್.ಪಿ.ಕುಲಕರ್ಣಿ -ಸಿಇ-KRIDCL (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿಮಿಟೆಡ್-ಬೆಂಗಳೂರು)
  • ಹೆಚ್.ಆರ್.ಕೃಷ್ಣಪ್ಪ -ಸಹಾಯಕ ನಿರ್ದೇಶಕ- ಮಾಲೂರು ನಗರ ನಗರ ಯೋಜನಾ ಪ್ರಾಧಿಕಾರ, ಕೋಲಾರ
  • ಸುರೇಶ್ ಮೋಹ್ರೆ -JE PRE ಬೀದರ್
  • ವೆಂಕಟೇಶ್ ಟಿ -DCF ಸಾಮಾಜಿಕ ಅರಣ್ಯ-ಮಂಡ್ಯ
  • ಸಿದ್ದರಾಮ ಮಲ್ಲಿಕಾರ್ಜುನ್ -AEE ಹೆಸ್ಕಾಂ ವಿಜಯಪುರ
  • ಎ.ಕೃಷ್ಣಮೂರ್ತಿ -ಹಿರಿಯ ಮೋಟಾರು ವಾಹನ ನಿರೀಕ್ಷಕರು-ಕೋರಮಂಗಲ
  • ಎ.ಎನ್.ವಿಜಯ್​ ಕುಮಾರ್​ -ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್-ಬಳ್ಳಾರಿ

ಕೋಲಾರ ಜಿಲ್ಲೆಯ ಮಾಲೂರು‌ ನಗರ ಸಭೆಯ ಯೋಜನಾ ನಿರ್ದೇಶಕ ಹೆಚ್.ಆರ್.ಕೃಷ್ಣಪ್ಪ ನಿವಾಸ ಹಾಗೂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳ್ಳಂಬೆಳಗ್ಗೆಯೇ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಹಾಗೂ ಆಸ್ತಿ‌ಪತ್ರಗಳನ್ನ ಪರಿಶೀಲನೆ ಮಾಡ್ತಿದ್ದಾರೆ. ಇವರ ಸ್ವ-ಗ್ರಾಮವಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ, ಮಾಲೂರು ಮನೆ, ಬೆಂಗಳೂರಿನ ವಿಜಯನಗರದಲ್ಲಿರುವ ಮನೆ ಮತ್ತು ‌ಕಚೇರಿ ಐದು ಕಡೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾವಣಗೆರೆ ಎಸಿಬಿ ಎಸ್ಪಿ ಜಯಪ್ರಕಾಶ್​ ನೇತ್ರತ್ವದ ತಂಡದಿಂದ ದಾಳಿ ನಡೆದಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ