Breaking News

ಮಳೆ ಪ್ರಾರ್ಥಿಸಿ ಕತ್ತೆ ಮದುವೆ ಮಾಡಿದ ಗ್ರಾಮಸ್ಥರು

Spread the love

ಚಿತ್ರದುರ್ಗ: ಕತ್ತೆ ಮದುವೆ ಮಾಡಿದರೆ ಮಳೆ ಬರುತ್ತದೆ ಎಂಬ ನಂಬಿಕೆಯಿಂದ ಕೋಟೆ ನಾಡಿನಲ್ಲಿ ಕತ್ತೆ ಮದುವೆಯನ್ನು ಮಾಡಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥಿಸಿದ್ದಾರೆ. ಜಿಲ್ಲೆಯ ಈಚಲನಾಗೇನಹಳ್ಳಿಯಲ್ಲಿ ಸಮೃದ್ಧ ಮಳೆ‌ ಬೆಳೆಗಾಗಿ ಕತ್ತೆ ಮದುವೆ ಮಾಡಿ ವರುಣನಿಗೆ ಪ್ರಾರ್ಥನೆ ಸಲ್ಲಿಸಲಾಗಿದೆ.

 

 

 

ತುಂತುರು ಮಳೆಯ ಸಂದರ್ಭದಲ್ಲಿ ಮಳೆಯಾಗದಿದ್ದರೆ ಮಳೆಗಾಗಿ ಮೊರೆಯಿಟ್ಟು ಸಾಂಪ್ರದಾಯಿಕವಾಗಿ ಕತ್ತೆಗಳ ಮದುವೆ ಮಾಡಿಸಿ, ಊರಿನ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಮಾಡಿ ದೇವರಲ್ಲಿ ಮಳೆಯಾಗುವಂತೆ ಬೇಡಿಕೊಳ್ಳುವ ಈ ವಿಶೇಷ ಆಚರಣೆ ಪೂರ್ವಜರ ಕಾಲದಿಂದಲೂ ಚಾಲ್ತಿಯಲ್ಲಿದೆ. ಈಗಲೂ ಕೂಡ ರಾಜ್ಯದ ಹಲವಾರು ಭಾಗಗಳಲ್ಲಿ ಈ ಸಾಂಪ್ರದಾಯಿಕ ಆಚರಣೆ ಇನ್ನು ಜೀವಂತವಾಗಿರೋದು ವಿಶೇಷ.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ