Breaking News

ಮಾಟ ಮಂತ್ರ ವಿಚಾರ -ಪಕ್ಕದ ಮನೆ ಮಹಿಳೆಗೆ ನಡು ರಸ್ತೆಯಲ್ಲೇ ಥಳಿತ

Spread the love

ಬೆಂಗಳೂರು: ಮಾಟ ಮಂತ್ರದ ಆರೋಪವೊಡ್ಡಿ ಪಕ್ಕದ ಮನೆಯವರಿಗೆ ಕಿರುಕುಳ ನೀಡಿ ಜುಟ್ಟು ಹಿಡಿದು ಹಲ್ಲೆ ಮಾಡಿದ ಘಟನೆ ಕೆಂಗೇರಿಯಲ್ಲಿ ನಡೆದಿದೆ.

ರೇಣುಕಾ ಅನ್ನೋ ಮಹಿಳೆಗೆ ಪಕ್ಕದ ಮನೆಯವರು ಕಿರುಕುಳ ನೀಡ್ತಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ರೇಣುಕಾ ಪಕ್ಕದ ಮನೆಯಲ್ಲಿ ಅಲಮೇಲಮ್ಮ ಎಂಬುವವರ ಕುಟುಂಬ ವಾಸಿಸುತ್ತಿದ್ದು ಅವರ ಮನೆಯಲ್ಲಿ ಇತ್ತೀಚೆಗೆ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಳು. ಆ ಸಾವಿಗೆ ಪಕ್ಕದ ಮನೆಯ ರೇಣುಕಾ ಕಾರಣವೆಂದು ದಿನಪ್ರತಿ ಅಲಮೇಲಮ್ಮ ಕುಟುಂಬದವರು ಹಲ್ಲೆ ಮಾಡ್ತಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ.

 

 

ಪಕ್ಕದ ಮನೆಯವರ ಕಾಟದಿಂದ ನೆಮ್ಮದಿಯೇ ಇಲ್ಲ. ಪ್ರತಿ ದಿನವೂ ಹಲ್ಲೆ ಮಾಡೋಕೆ ಮುಂದಾಗ್ತಾರೆ. ಮನೆ ಹತ್ತಿರ ಬಂದು ಗಲಾಟೆ ಮಾಡ್ತಾರೆ. ಆಸಿಡ್ ಹಾಕ್ತೀವಿ. ಸುಪಾರಿ ಕೊಡ್ತೀವಿ ಅಂತಾ ಬೆದರಿಕೆ ಹಾಕ್ತಾರೆ ಅವರಿಂದ ನಮಗೆ ಮುಕ್ತಿ ಕೊಡಿಸಿ ಅಂತಾ ನ್ಯೂಸ್​ಫಸ್ಟ್​ನ ಮುಂದೆ ಅಳಲು ತೊಡಿಕೊಂಡಿದ್ದಾರೆ ರೇಣುಕಾ.

ಈ ಕುರಿತು ಕೆಂಗೇರಿ ನಗರ ಪೊಲೀಸ್ ಠಾಣೆಗೆ ಕಂಪ್ಲೆಂಟ್ ಕೊಟ್ಟರೂ ಯಾವುದೇ ಉಪಯೋಗ ಆಗಿಲ್ಲ ಎಂದು ಆರೋಪಿಸಿರುವ ರೇಣುಕಾ, ಸದ್ಯ ಉಪ್ಪಾರಪೇಟೆ ಎಸಿಪಿ ಮೊರೆ ಹೋಗಿದ್ದಾರೆ.


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ