ಬೆಂಗಳೂರು: ಭ್ರಷ್ಟ ಅಧಿಕಾರಿಗಳ ಮೇಲೆ ಸಮರ ಸಾರಿದ್ದ ಎಸಿಬಿ ಅಧಿಕಾರಿಗಳು ಇಂದು ಒಟ್ಟು 9 ಸರ್ಕಾರಿ ನೌಕರರಿಗೆ ಸೇರಿದ 43 ಸ್ಥಳಗಳಲ್ಲಿ ಒಟ್ಟು 310 ಅಧಿಕಾರಿಗಳಿಂದ 43 ತಂಡಗಳಾಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕೋಟ್ಯಂತರ ಮೌಲ್ಯದ ಆಸ್ತಿಪಾಸ್ತಿ ಬೆಳಕಿಗೆ ಬಂದಿದೆ. ದಾಳಿಯಲ್ಲಿ ಸಿಕ್ಕ ಆಸ್ತಿ-ಪಾಸ್ತಿ, ಚಿನ್ನ ಹಣದ ಅಂಕಿ ಅಂಶಗಳು ಹೀಗಿವೆ..
1. ಜಿ ಶ್ರೀಧರ್- ಕಾರ್ಯ ಪಾಲಕ ಅಭಿಯಂತರ, ಜಿಲ್ಲಾ ನಗರಾಭಿವೃದ್ಧಿ ಕೋಶ, ಡಿಸಿ ಕಚೇರಿ ಮಂಗಳೂರು.
- ಮೈಸೂರಿನಲ್ಲಿ ಒಂದು ಮನೆ, ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನಲ್ಲಿ ಒಂದು ಮನೆ
- ವಿವಿಧ ನಗರಗಳಲ್ಲಿ ನಾಲ್ಕು ಸೈಟ್ ಗಳು
- ಬ್ಯಾಂಕ್ ಉಳಿತಾಯ ಖಾತೆ ಡೆಪಾಸಿಟ್ ಇನ್ಶೂರೆನ್ಸ್, ಡೆಪಾಸಿಟ್ ಬಾಂಡ್ ಗಳು
- ಒಂದು ಕಾರು, ಎರಡು ದ್ವಿಚಕ್ರ, ಚಿನ್ನ ಬೆಳ್ಳಿ ಆಭರಣಗಳು ಬೆಲೆ ಬಾಳುವ ಗೃಹೋಪಯೋಗಿ ವಸ್ತುಗಳು.
2. ಸುರೇಶ್- JE- ಗ್ರಾಮೀಣ ನೀರು ಸರಬರಾಜು ಅಭಿವೃದ್ಧಿ ಉಪ ವಿಭಾಗ ಬಸವ ಕಲ್ಯಾಣ ಬೀದರ್ ಜಿಲ್ಲೆ
- ಬಸವ ಕಲ್ಯಾಣದಲ್ಲಿ ಒಂದು ಮನೆ..
- ಬೀದರ್ ಜಿಲ್ಲೆ ಬಾಲ್ಕಿಯಲ್ಲಿ ಒಂದು ಪೆಟ್ರೋಲ್ ಬಂಕ್..
- ನಾಲ್ಕು ನಿವೇಶನ, ವಿವಿಧ ಬ್ಯಾಂಕ್ ಗಳಲ್ಲಿ ಎಫ್ಡಿ ಡೆಪಾಸಿಟ್,
- ಬೆಲೆ ಬಾಳುವ ಚಿನ್ನಾ ಭರಣಗಳು, ಒಂದುದ್ವಿಚಕ್ರ ವಾಹನ ಪತ್ತೆ
3. ಆರ್ ಪಿ ಕುಲಕರ್ಣಿ- ಪ್ರಧಾನ ಇಂಜಿನಿಯರ್, ಮುಖ್ಯ ಯೋಜನಾಧಿಕಾರಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ, ಬೆಂಗಳೂರು
- ಬೆಂಗಳೂರಲ್ಲಿ ಒಂದು ಮನೆ, ನಾಲ್ಕು ಫ್ಲ್ಯಾಟ್, ವಿವಿಧ ಕಡೆ ಮೂರಿ ನಿವೇಶನ..
- ಎರಡು ಕಾರು, ಒಂದು ದ್ವಿಚಕ್ರ ವಾಹನ, ಚಿನ್ನಾ ಬೆಳ್ಳಿ ಆಭರಣಗಳು..
- ಬ್ಯಾಂಕ್ಖಾತೆಗಳಲ್ಲಿ ಠೇವಣಿಗಳು, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು ಪತ್ತೆ.
4. ಎ ಕೃಷ್ಣಮೂರ್ತಿ- ಹಿರಿಯ ಮೋಟಾರು ವಾಹನ ನಿರೀಕ್ಷಕರು.. ಕೋರಮಂಗಲ ಆರ್ಟಿಓ ಕಚೇರಿ ಬೆಂಗಳೂರು..
- ಬೆಂಗಳೂರಿನ ಹಂಪಿ ನಗರದಲ್ಲಿ ಒಂದು ಮನೆ..
- ದೊಮ್ಮಲೂರಲ್ಲಿ ಒಂದುಮನೆ..
- ಬೆಂಗಳೂರಲ್ಲಿ ಒಂದು ಶಾಲಾ ಕಟ್ಟಡ..
- ತುಮಕೂರು ಕೊರಟಗೆರೆಯಲ್ಲಿ ಫಾರ್ಮ್ ಹೌಸ್..
- ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ 30 ಸೈಟ್ ಗಳಿವೆ..
- ಚಿನ್ನಾ ಬೆಳ್ಳಿ ಆಭರಣಗಳು, ವಿವಿಧ ಕಡೆಗಳಲ್ಲಿ 82 ಎಕರೆ ಕೃಷಿ ಜಮೀನು..
- ನಾಲ್ಕು ದ್ವಿಚಕ್ರ ವಾಹನ, ಮೂರು ಕಾರುಗಳು, ಒಂದು ಟೆಂಪೋ ಮ್ಯಾಕ್ಸ್ ಕ್ಯಾಬ್..
- ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು..
5. ಕೃಷ್ಣ ಎಸ್ ಹೆಬ್ಬೂರು- ಕಾರ್ಯ ನಿರ್ವಾಹಕ ಅಭಿಯಂತರ, ಕೆಆರ್ ಐಡಿ ಎಲ್ ಉಡುಪಿ ಜಿಲ್ಲೆ..
- ಉಡುಪಿಯಲ್ಲಿ ಒಂದು ಮನೆ, ಬೆಂಗಳೂರು ನಗರ ಜಿಗಣಿಯಲ್ಲಿ ಒಂದು ಮನೆ..
- ಹುಬ್ಬಳ್ಳಿಯಲ್ಲಿ ಒಂದು ಮನೆ..
- ಉಡುಪಿ ಜಿಲ್ಲೆ ಶಿವಳ್ಳಿ ಗ್ರಾಮದಲ್ಲಿ 15.66 ಸೆಂಟ್ಸ್ ನಿವೇಶನ..
- ಎರಡು ದ್ವಿಚಕ್ರ ವಾಹನ, ಒಂದುಕಾರು, ಚಿನ್ನಾಬೆಳ್ಳಿ ಆಭರಣಗಳು.
- ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು..
6. ಟಿ ವೆಂಕಟೇಶ್- ಉಪ ಅರಣ್ಯ ಸಂರಕ್ಷಣಾಧಿಕಾರಿ.. ಸಾಮಾಜಿಕ ಅರಣ್ಯ, ಮಂಡ್ಯ ಜಿಲ್ಲೆ..
- ಮೈಸೂರು ನಗರದಲ್ಲಿ ಎರಡು ಮನೆ..
- ವಿವಿಧ ನಗರಗಳಲ್ಲಿ 9 ನಿವೇಶನ..
- 12 ಎಕರೆ ಕೃಷಿ ಜಮೀನು, ಒಂದು ಕಾರು..
- ಮೂರಿ ದ್ವಿಚಕ್ರ ವಾಹನ, ಚಿನ್ನಾ ಬೆಳ್ಳಿ ಆಭರಣಗಳು..
- ನಗದು ಹಣ, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು..
7. ಹೆಚ್ ಆರ್ ಕೃಷ್ಣಮೂರ್ತಿ- ಸಹಾಯಕ ನಿರ್ದೇಶಕರು ಮಾಲೂರು ಟೌನ್ ಪ್ಲ್ಯಾನಿಂಗ್ ಅಥಾರಿಟಿ ಮಾಲೂರು ಕೋಲಾರ ಜಿಲ್ಲೆ..
- ಬೆಂಗಳೂರು ವಮೊಗ್ಗ, ದಾವಣಗೆರೆಯಲ್ಲಿ ತಲಾ ಒಂದೊಂದು ಮನೆ..
- ವಿವಿಧ ಪ್ರಮುಖ ನಗರಗಳಲ್ಲಿ ನಾಲ್ಕು ನಿವೇಶನ..
- ಚನ್ನಗಿರಿಯಲ್ಲಿ 15 ಎಕರೆ 15 ಗುಂಟೆ ಕೃಷಿ ಜಮೀನು..
- ಎರಡು ದ್ವಿಚಕ್ರ ವಾಹನ, ಒಂದು ಕಾರು..
- ಚಿನ್ನ ಬೆಳ್ಳಿ ಆಭರಣಗಳು, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು..
8. ಸಿದ್ದರಾಮ ಮಲ್ಲಿಕಾರ್ಜುನ ಬೀರಾದಾರ AEE- ಒನ್ 10 ಕೆವಿ ನೋಡೆಲ್ ಅಧಿಕಾರಿ.. ಕೆಪಿಟಿಸಿಎಲ್, ಪ್ರಭಾರಿ EE- ವಿಜಯಪುರ..
- ವಿಜಯಪುರದಲ್ಲಿ ಮೂರು ವಾಸದ ಮನೆ..
- ವಿವಿಧ ಕಡೆಗಳಲ್ಲಿ ನಾಲ್ಕು ನಿವೇಶನ..
- 35 ಎಕರೆ ಕೃಷಿ ಜಮೀನು..
- ಒಂದು ಕಾರು ಎರಡು ದ್ವಿಚಕ್ರ ವಾಹನ..
- ಚಿನ್ನ ಬೆಳ್ಳಿ ಆಭರಣಗಳು, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು..
9. ಎ ಎನ್ವಿಜಯ್ ಕುಮಾರ್- ಎಲೆಕ್ಟ್ರಿಕಲ್ಇನ್ಸ್ ಪೆಕ್ಟರ್.. ಜೆಸ್ಕಾಂ ಬಳ್ಳಾರಿ..
- ಬೆಂಗಳೂರು, ಬಳ್ಳಾರಿಯಲ್ಲಿ ತಲಾ ಒಂದರಂತೆ ಒಂದೊಂದು ಮನೆ..
- ವಿವಿಧ ನಗರಗಳಲ್ಲಿ ಒಂಟು ಎಂಟು ನಿವೇಶನ..
- ಎರಡು ಕಾರು, ಒಂದು ದ್ವಿಚಕ್ರ ವಾಹನ..
- ಚಿನ್ನಾ ಬೆಳ್ಳಿ ಆಭರಣಗಳು, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು..