Breaking News
Home / ರಾಜಕೀಯ / ಮಹಾ ಮಳೆಗೆ ಕೊಡಗು ಜಿಲ್ಲೆಯಲ್ಲಿ ಮೊದಲ ಬಲಿ

ಮಹಾ ಮಳೆಗೆ ಕೊಡಗು ಜಿಲ್ಲೆಯಲ್ಲಿ ಮೊದಲ ಬಲಿ

Spread the love

ಕೊಡಗು : ಮಹಾ ಮಳೆಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಮಡಿಕೇರಿಯ ಆವಂದೂರು ಗ್ರಾಮದ ಕಿರು ಹೊಳೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಮೃತದೇಹ ಪತ್ತೆಯಾಗಿದೆ. ಬಾಬಿ ಚಿಣ್ಣಪ್ಪ(70) ಮೃತರಾಗಿದ್ದಾರೆ.

ಬಾಬಿ ಚಿಣ್ಣಪ್ಪ ನಿನ್ನೆ ಸಂಜೆ ಕಿರು ಹೊಳೆ ದಾಟುವಾಗ ಆಯತಪ್ಪಿ ಬಿದ್ದು, ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿಹೋಗಿದ್ದರು.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ್ದ ಅಗ್ನಿಶಾಮಕ ದಳ, ಪೊಲೀಸರು ಶೋಧ ಕಾರ್ಯಚರಣೆ ಮುಂದುವರೆಸಿದ್ದರು. ಆದ್ರೆ ಮಳೆ ಹೆಚ್ಚಾದ ಕಾರಣ ಕಾರ್ಯಚರಣೆ ಸ್ಥಗಿತಗೊಳಿಸಿದ್ದರು.

ಇಂದು ಬೆಳಿಗ್ಗೆ ಶೋಧ ಕಾರ್ಯಚರಣೆ ಮುಂದುವರೆದಿದ್ದು, ಘಟನೆ ನಡೆದ ಸ್ಥಳದ ಅನತಿ ದೂರದಲ್ಲಿ ಮೃತದೇಹ ಪತ್ತೆಯಾಗಿದೆ.

ಇದರೊಂದಿಗೆ ಮಹಾ ಮಳೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ