Breaking News
Home / ರಾಜಕೀಯ / ಮುಖಕ್ಕೆ ಧರಿಸಬೇಕಿದ್ದ ಮಾಸ್ಕನ್ನು ಸಚಿವರು ಎಲ್ಲಿ ಹಾಕಿಕೊಂಡಿದ್ದಾರೆ ನೋಡಿ- ಜಾಲತಾಣದಲ್ಲಿ ಟ್ರೋಲ್​

ಮುಖಕ್ಕೆ ಧರಿಸಬೇಕಿದ್ದ ಮಾಸ್ಕನ್ನು ಸಚಿವರು ಎಲ್ಲಿ ಹಾಕಿಕೊಂಡಿದ್ದಾರೆ ನೋಡಿ- ಜಾಲತಾಣದಲ್ಲಿ ಟ್ರೋಲ್​

Spread the love

ಡೆಹ್ರಾಡೂನ್: ಉತ್ತರಾಖಂಡದ ಸಚಿವ ಸ್ವಾಮಿ ಯತೀಶ್ವರಾನಂದ ಇದೀಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​ ಆಗಿದ್ದಾರೆ. ಇದಕ್ಕೆ ಕಾರಣ ಅವರು ಧರಿಸಿರುವ ಮಾಸ್ಕ್​.

ಮಾಸ್ಕ್​ ಅನ್ನು ಮುಖಕ್ಕೆ ಹಾಕಿಕೊಳ್ಳದೇ ಸಭೆಯೊಂದರಲ್ಲಿ ಅದನ್ನು ಕಾಲಿನ ಬೆರಳಿಗೆ ಸಿಕ್ಕಿಸಿಕೊಂಡು ಕುಳಿತಿದ್ದು ಜಾಲತಾಣದಲ್ಲಿ ಫೋಟೋ ವೈರಲ್​ ಆಗಿದೆ. ಸೋಫಾ ಮೇಲೆ ಕಾಲಿನ ಮೇಲೆ ಕಾಲು ಹಾಕಿ ಕುಳಿತಿರುವ ಸಚಿವರು ತಮ್ಮ ಕಾಲಿನ ಬೆರಳಿನಲ್ಲಿ ಮಾಸ್ಕ್ ಸಿಕ್ಕಿಸಿಕೊಂಡಿದ್ದಾರೆ.

ಸಚಿವರೇ ಈ ರೀತಿ ಕರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ವಿರೋಧಪಕ್ಷದ ನಾಯಕರು ಕೂಡ ಟೀಕಿಸಿದ್ದಾರೆ. ಮಾತ್ರವಲ್ಲದೇ ಬಿಜೆಪಿ ನಾಯಕರು ಈ ಸಭೆಯಲ್ಲಿ ಮಾಸ್ಕ್ ಧರಿಸಿಲ್ಲ. ಉತ್ತರಾಖಂಡದ ಸಚಿವರಾದ ಬಿಶನ್ ಸಿಂಗ್ ಚುಪಾಲ್ ಮತ್ತು ಸುಭೋದ್ ಉನಿಯಲ್ ಕೂಡ ಇದರಲ್ಲಿ ಭಾಗವಹಿಸಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

Spread the love ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ